HOSANAGARA | ಅಬ್ಬರದಿಂದ ಸುರಿದು ಅನಾಹುತಗಳನ್ನು ಸೃಷ್ಟಿ ಮಾಡಿದ ಪುಷ್ಯ ಮಳೆ ಇಂದು ಕೊನೆಗೊಳ್ಳಲಿದ್ದು ನಾಳೆಯಿಂದ ಆಶ್ಲೇಷ ಮಳೆ ಪ್ರಾರಂಭವಾಗಲಿದೆ. ನಿನ್ನೆಯಿಂದ ಮಳೆ ಪ್ರಮಾಣ ತಗ್ಗಿದ್ದು ನೆರೆ ಭೀತಿ ಎದುರಿಸುತ್ತಿದ್ದ ಜನರು ಇದೀಗ ಸಹಜ ಸ್ಥಿತಿಯತ್ತ ಮರಳುತ್ತಿದ್ದಾರೆ. ಎಂದಿನಂತೆ ಶಾಲಾ, ಕಾಲೇಜುಗಳು ಸಹ ಪುನರಾರಂಭಗೊಂಡಿವೆ.
ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ಅತಿವೃಷ್ಠಿ ಸಂತ್ರಸ್ಥರ ಸ್ಥಿತಿ ಅಧೋಗತಿಗೆ ಬಂದಿದೆ ; ಶಾಸಕ ಆರಗ ಜ್ಞಾನೇಂದ್ರ
ಗುರುವಾರ ಬೆಳಿಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ತಾಲೂಕಿನ ಹಲವೆಡೆ ದಾಖಲಾದ ಮಳೆ ವಿವರ ಹೀಗಿದೆ.
ಎಲ್ಲೆಲ್ಲಿ ಎಷ್ಟಾಗಿದೆ ಮಳೆ ?
- ಹುಲಿಕಲ್ : 171.2 mm
- ಮಾಸ್ತಿಕಟ್ಟೆ : 160 mm
- ಯಡೂರು : 123 mm
- ಮಾಣಿ : 107 mm
- ಚಕ್ರಾನಗರ : 75 mm
- ಕಾರ್ಗಲ್ (ಸಾಗರ) : 70.6 mm
- ಸಾವೇಹಕ್ಲು : 66 mm
- ರಿಪ್ಪನ್ಪೇಟೆ : 43.2 mm
- ಹೊಸನಗರ : 24.2 mm
- ಹುಂಚ : 21 mm
- ಅರಸಾಳು : 12.8 mm
ಧರೆ ಕುಸಿತದಿಂದ ಸಂಪರ್ಕ ಕಡಿತಗೊಳ್ಳುವ ಆತಂಕ, ಘಟನಾ ಸ್ಥಳಕ್ಕೆ ಮಾಜಿ ಸಚಿವ ಕಿಮ್ಮನೆ ಭೇಟಿ, ಪರಿಶೀಲನೆ
ಲಿಂಗನಮಕ್ಕಿ ಜಲಾಶಯ :
1819 ಅಡಿ ಗರಿಷ್ಠ ಮಟ್ಟದ ಲಿಂಗನಮಕ್ಕಿ ಜಲಾಶಯ ಗುರುವಾರ ಬೆಳಗ್ಗೆ 8:00 ಗಂಟೆಗೆ 1814 ಅಡಿ ತಲುಪಿದ್ದು ಜಲಾಶಯ ಭರ್ತಿಗೆ ಕೇವಲ 5 ಅಡಿ ನೀರು ಮಾತ್ರ ಅವಶ್ಯಕತೆ ಇದ್ದ ಕಾರಣ ಮುಂಜಾಗ್ರತಾ ಕ್ರಮವಾಗಿ ಜಲಾಶಯದಿಂದ ಇಂದು 5 ಗೇಟ್ಗಳ ಮೂಲಕ 10,000 ಕೂಸೆಕ್ ನೀರನ್ನು ಹೊರಬಿಡುವ ಸಾಧ್ಯತೆ ಇರುವ ಕಾರಣ ನದಿ ಪಾತ್ರದ ಕೆಳಭಾಗದ ಜನರು ತಮ್ಮಲ್ಲಿರುವ ಜಾನುವಾರ ಸಹಿತ ಸುರಕ್ಷಿತ ಸ್ಥಳಕ್ಕೆ ಧಾವಿಸಬೇಕೆಂದು ಎಚ್ಚರಿಸಿದ್ದಾರೆ.
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
RipponpeteJune 2, 2025ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳು ಶಿವಮೊಗ್ಗ ಬೆಕ್ಕಿನಕಲ್ಮಠಕ್ಕೆ ಭೇಟಿ
RipponpeteJune 1, 2025ಶ್ರುತಪಂಚಮಿ ಆಚರಣೆ | ಜೈನಧರ್ಮ ಸಿದ್ಧಾಂತಗಳು ಜೀವನ ಮೌಲ್ಯಗಳನ್ನು ವರ್ಧಿಸುತ್ತದೆ ; ಹೊಂಬುಜ ಶ್ರೀಗಳು
HosanagaraJune 1, 2025ಹೊಸನಗರ ; ಜೂ. 2 ಮತ್ತು 3ಕ್ಕೆ ತಾಲೂಕಿನಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ 2025 ಕಾರ್ಯಕ್ರಮ
Adike RateJune 1, 2025Arecanut, Black Pepper Price 31 May 2025 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?