ಹೊಸನಗರ

ಹೊಸನಗರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಮೇಲ್ಛಾವಣಿ ದುರಸ್ತಿಗೆ 50 ಲಕ್ಷ ರೂ. ಮಂಜೂರಾತಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ; ಕೆ.ಎಸ್‌. ಗುರುರಾಜ್

HOSANAGARA | ಸುಮಾರು 8 ವರ್ಷಗಳ ಹಿಂದೆ ಹೊಸನಗರ ಸಾರ್ವಜನಿಕ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಿಸಿ ಉದ್ಘಾಟಿಸಲಾಗಿದ್ದು ಆದರೆ ಆಸ್ಪತ್ರೆಯ ಮೇಲ್ಛಾವಣಿ, ಆಪರೇಷನ್ ಥಿಯೇಟರ್‌ನ ಕೆಲವು ಭಾಗಗಳಲ್ಲಿ ಈ ವರ್ಷದ ಮಳೆಗಾಲದಲ್ಲಿ ಸೋರುತ್ತಿರುವ ವಿಷಯ ಶಾಸಕ ಬೇಳೂರು ಗೋಪಾಲಕೃಷ್ಣರವರ ಗಮನಕ್ಕೆ ಬಂದಿದ್ದು ಆದರೆ ಮೇಲ್ಚಾವಣಿ ದುರಸ್ಥಿಗಾಗಿ ಶಾಸಕರು 50 ಲಕ್ಷ ರೂ. ಮಂಜೂರಾತಿಗಾಗಿ ಒಂದು ತಿಂಗಳ ಹಿಂದೆಯೇ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಕಾಂಗ್ರೆಸ್‌ನ ಟೌನ್ ಘಟಕದ ಅಧ್ಯಕ್ಷ ಕೆ.ಎಸ್. ಗುರುರಾಜ್‌ ಹೇಳಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಇಲ್ಲಿನ ಸಾರ್ವಜನಿಕ ಆಸ್ಪತ್ರೆಗೆ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು, ಶಾಸಕರ ವಿಶೇಷ ಅಧಿಕಾರಿ ಟಿ.ಪಿ ರಮೇಶ್ ಶಿವಮೊಗ್ಗ ಇಂಜಿನಿಯರ್ ಹರೀಶ್‌ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಮಾತನಾಡಿದರು.

ಬೇಳೂರು ಗೋಪಾಲಕೃಷ್ಣರವರು ಶಾಸಕರಾಗಿ ಅಧಿಕಾರಕ್ಕೆ ಬಂದು ಕೇವಲ 1 ವರ್ಷ ಎರಡು ತಿಂಗಳು ಕಳೆದಿದೆ. ಈ ವರ್ಷ ಮಳೆಗಾಲ ನೋಡುವಂತಾಗಿದೆ. ಈಗಾಗಲೇ ಹೊಸನಗರ ಕ್ಷೇತ್ರದ ಸಾಕಷ್ಟು ಅಭಿವೃದ್ಧಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದ್ದು ಮಳೆಗಾಲ ಮುಗಿದ ಮೇಲೆ ಅಭಿವೃದ್ಧಿ ಕೆಲಸಗಳು ಆಗಲಿದೆ. ಮಳೆಗಾಲ ಮುಗಿಯುವುದನ್ನೇ ಕಾಯುತ್ತಿರುವ ನಮ್ಮ ಶಾಸಕರು, ಮಳೆಗಾಲದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಇನ್ನೂ 15 ದಿನಗಳಲ್ಲಿ ಆಸ್ಪತ್ರೆಯ ಮೇಲ್ಚಾವಣಿ ಕೆಲಸ ಆರಂಭಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸದಾಶಿವ ಶ್ರೇಷ್ಠಿ, ಆರೋಗ್ಯ ಇಲಾಖೆಯ ಇಂಜಿನಿಯರ್ ಹರೀಶ್, ಶಾಸಕರ ವಿಶೇಷ ಅಧಿಕಾರಿ ಟಿ.ಪಿ ರಮೇಶ್, ನಾಸೀರ್, ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು, ಆಸ್ಪತ್ರೆಯ ಆರೋಗ್ಯಾಧಿಕಾರಿ ಗುರುಮೂರ್ತಿ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Read More

Rain Report | ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ & ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟಾಗಿದೆ ಮಳೆ ?

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಅವೈಜ್ಞಾನಿಕ ಪದ್ದತಿಯೋ ಅಥವಾ ಸರ್ಕಾರಿ ಶಾಲೆಗಳನ್ನು ಮುಚ್ಚುವ ಹುನ್ನಾರವೋ…!? ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲೇನಿದು ?

ಹೊಸನಗರ ಮಂಡಲ ಬಿಜೆಪಿ ವಿಶೇಷ ಕಾರ್ಯಕಾರಣಿ ಸಭೆ | ಸಾಲು ಸಾಲು ಭ್ರಷ್ಟಾಚಾರ, ಕಾಂಗ್ರೆಸ್ ಸರ್ಕಾರದ ಸಾಧನೆ ; ಹರತಾಳು ಹಾಲಪ್ಪ

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]