Ripponpete

ರಿಪ್ಪನ್‌ಪೇಟೆ ; 69ನೇ ಕನ್ನಡ ರಾಜ್ಯೋತ್ಸವ ಆಚರಣೆ

RIPPONPETE ; ಇಲ್ಲಿನ ಕಸ್ತೂರಿ ಕನ್ನಡ ಸಂಘ ಮತ್ತು ಡಾ.ಪುನೀತ್‌ರಾಜ್ ಅಭಿಮಾನಿ ಬಳಗ ಇವರ ಸಹಯೋಗದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಮಾದರಿ ಪಾಠ ಶಾಲಾ ಆವರಣದಲ್ಲಿ ಕನ್ನಡ ಧ್ವಜವನ್ನು ಧ್ವಜಾರೋಹನ ಮಾಡುವ ಮೂಲಕ 69ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.

WhatsApp Group Join Now
Telegram Group Join Now
Instagram Group Join Now

ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷೆ ಧನಲಕ್ಷ್ಮಿ ಕನ್ನಡ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಮಾತೃಭಾಷೆಯ ಕನ್ನಡವನ್ನು ಗೌರವಿಸುವ ಮೂಲಕ ಅದನ್ನು ಪ್ರೀತಿಸಿ ಪ್ರೋತ್ಸಾಹಿಸುವಂತಾಗ ಬೇಕು ನಾಡು ನುಡಿ ಕಲೆ ಸಾಹಿತ್ಯ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಇಂದಿನ ಯುವಜನಾಂಗ ಮುಂದಾಗಬೇಕು ಎಂದು ಕರೆ ನೀಡುವ ಮೂಲಕ ಭಾಷೆಯ ಬಗ್ಗೆ ಆವಹೇಳನ ನಡೆಸುವವರ ವಿರುದ್ಧ ನಾವು ಸಂಘಟನಾತ್ಮಕ ಹೋರಾಟಕ್ಕೆ ಸದಾ ಸಿದ್ದರಾಗಬೇಕು ಎಂದರು.

ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ಕಸ್ತೂರಿ ಸಂಘದ ಪ್ರಧಾನ ಕಾರ್ಯದರ್ಶಿ ನಿರ್ಮಲ, ಆರ್.ಎ.ಚಾಬುಸಾಬ್, ಜಿ.ಎಸ್.ವರದರಾಜ್, ನಗರಸಭೆಯ ನಿವೃತ್ತ ನೌಕರ ಹಭಿಬುಲ್ಲಾ ಷರೀಫ್ ಇನ್ನಿತರ ಹಲವರು ಹಾಜರಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]