Hosanagara

ರಿಪ್ಪನ್‌ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ; ವಂದೇ ಮಾತರಂ ಗೀತೆ ಹಾಡದೆ ಅಗೌರವ ತೋರಿದ ಅಧಿಕಾರಿಗಳ ವಿರುದ್ಧ ಸಾರ್ವಜನಿಕರ ಆಕ್ಷೇಪ

InShot 20260815 150136736

ರಿಪ್ಪನ್‌ಪೇಟೆ : 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಸಡಗರದೊಂದಿಗೆ ಸ್ಥಳೀಯ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ರಾಜೇಂದ್ರಕುಮಾರ್ ಧ್ವಜಾರೋಹಣ ನೆರವೇರಿಸುವ ಮೂಲಕ ಧ್ವಜವಂದನೆ ಸಲ್ಲಿಸಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಧ್ವಜಾರೋಹಣಕ್ಕೂ ಮುನ್ನ ವಂದೇ ಮಾತರಂ ಗೀತೆ ಹಾಡಬೇಕು ಎಂಬ ನಿಯಮವಿದ್ದರೂ ಕೂಡಾ ಇಲ್ಲಿನ ನಾಡಕಛೇರಿಯಲ್ಲಿ ವಂದೇ ಮಾತರಂ ಗೀತೆ ಹಾಡದೆ ಅಗೌರವ ತೊರಿದ್ದಾರೆ ಅಲ್ಲದೆ ಗ್ರಾಮ ಪಂಚಾಯಿತ್ ಅಹವರಣದಲ್ಲಿ ಧ್ವಜಾರೋಹಣ ಮಾಡುವ ಮುನ್ನ ವಂದೇ ಮಾತರಂ ಗೀತೆಯನ್ನು ಅರ್ಧ ಹಾಡಿದಾಗ ಅಲ್ಲಿಯೇ ಇದ್ದ ಸಾರ್ವಜನಿಕ ಹಿರಿಯ ಮುಖಂಡ ಆರ್.ಟಿ ಗೋಪಾಲ ಆಕ್ಷೇಪಣೆ ವ್ಯಕ್ತಪಡಿಸಿ ಪೂರ್ಣ ಹಾಡುವಂತೆ ಕೇಳಿದಾಗ ನಮಗೆ ಯಾವುದೇ ಸರ್ಕಾರದ ಸುತ್ತೋಲೆ ಇಲ್ಲ ಎಂದು ಕೆಲವು ಸರ್ಕಾರಿ ನೌಕರರು ಹೇಳಿಕೊಳ್ಳಲು ಮುಂದಾದರು. ಆಗ ಮೊಬೈಲ್‌ನಲ್ಲಿ ವಂದೇ ಮಾತರಂ ಗೀತೆಯನ್ನು ನೋಡಿಕೊಂಡು ಹಾಡಿ ಪೂರ್ಣಗೊಳಿಸಿದರು.

ಪೊಲೀಸ್‌ ಠಾಣೆಯಲ್ಲಿ ಪಿಎಸ್‌ಐ ರಾಜುರೆಡ್ಡಿ, ನಾಡಕಛೇರಿಯಲ್ಲಿ ಉಪತಹಸೀಲ್ದಾರ್ ಗೌತಮ್, ಸಮಾಜ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯದಲ್ಲಿ ಮೇಲ್ವಿಚಾರಕ ರಾಘವೇಂದ್ರ, ಬಿ.ಸಿ.ಎಂ ಹಿಂದುಳಿದ ವರ್ಗ ಇಲಾಖೆಯಲ್ಲಿ ಮೇಲ್ವಿಚಾರಕಿ ಸುಮಿತ್ರಭಾಯಿ, ಬರುವೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಶಿಕ್ಷಕಿ ಅಂಬಿಕಾ, ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಎಸ್.ಡಿ.ಎಂ.ಸಿ.ಅಧ್ಯಕ್ಷ ಮಂಜಪ್ಪ, ಗುಡ್‌ಶಫರ್ಡ್ ಶಾಲೆಯಲ್ಲಿ ಫಾದರ್ ಬಿನೋಯ್, ಮೇರಿಮಾತಾ ಪ್ರೌಢಶಾಲೆಯಲ್ಲಿ ಸಿಸ್ಟರ್ ಫಾತಿಮಾ, ಸರ್ಕಾರಿ ಪದವಿ ಪೂರ್ವ ಕಾಲೇಜ್ ಸಿ.ಡಿ.ಸಿ.ಉಪಾಧ್ಯಕ್ಷ ಜಿ.ಆರ್.ಗೋಪಾಲಕೃಷ್ಣ, ಸರ್ಕಾರಿ ಕೆ.ಪಿ.ಎಸ್.ಸಿ.ಪ್ರೌಢಶಾಲೆಯಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಸೇಫ್ ಸ್ಟಾರ್ ಸೌಹಾರ್ದ ಸಹಕಾರಿ ಸಂಘ ಶಾಖಾ ವ್ಯವಸ್ಥಾಪಕ ಆರ್.ಪ್ರತಾಪ್, ಸರ್ಕಾರಿ ಪದವಿ ಪೂರ್ವ ಕಾಲೇಜ್ ಪ್ರಾಚಾರ್ಯ ಎನ್.ರಾಜು, ಅರಸಾಳು ವಲಯ ಅರಣ್ಯಾಧಿಕಾರಿ ಶರಣಪ್ಪ,
ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಡಾ.ಅಂಜನಪ್ಪ, ಶ್ರೀಬಸವೇಶ್ವರ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹೆಚ್.ಎಂ.ವರ್ತೇಶ್‌ಗೌಡ ಹುಗುಡಿ, ಜಂಬಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್.ಡಿ.ಎಂ.ಸಿ.ಅಧ್ಯಕ್ಷ ಮಹಮ್ಮದ್ ರಫಿ, ಜಂಬಳ್ಳಿ ಶ್ರೀ ಗಜಾನನ ಯುವಕ ಸಂಘದ ಅಧ್ಯಕ್ಷ ಜೆ.ಎಂ.ಶಾಂತ ಕುಮಾರ್, ಮೂಗುಡ್ತಿ ವನ್ಯ ಜೀವಿ ವಿಭಾಗದ ವಲಯ ಅರಣ್ಯಾಧಿಕಾರಿ ಪ್ರಮೋದ್, ಕೋಡೂರು ಗ್ರಾಮ ಪಂಚಾಯಿತ್ ಕಛೇರಿಯಲ್ಲಿ ಪಿಡಿಒ ಎಸ್. ನಾಗರಾಜ, ಗವಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷ ಸೀತಾರಾಮ, ಹುಂಚ ಗ್ರಾಮ ಪಂಚಾಯಿತ ಪಿಡಿಒ ರಮೇಶ್, ಹುಂಚ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ನಿತೀಶ್, ರೈತ ಸಂಪರ್ಕ ಕೇಂದ್ರದಲ್ಲಿ ಸಹಾಯಕ ಕೃಷಿ ಅಧಿಕಾರಿಗಳು ದ್ವಜಾರೋಹಣ ನೆರವೇರಿಸಿದರು.

ನಂತರ ಶಾಲಾ ಮಕ್ಕಳಿಂದ ಊರಿನ ಪ್ರಮುಖ ಬೀದಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪಥಸಂಚಲನ ಸಾರ್ವಜನಿಕರ ಗಮನಸೆಳೆಯಿತು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>