ಹೊಸನಗರ ; ಕುಂದಾಪುರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಂಜಪ್ಪ (59) ಬುಧವಾರ ರಾತ್ರಿ ಮೃತಪಟ್ಟ ಘಟನೆ ನಡೆದಿದೆ.
ಮೂಲತಃ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಿವಾಸಿಯಾಗಿದ್ದ ನಂಜಪ್ಪ ಅವರು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು. ಸೋಮವಾರದಂದು ಕರ್ತವ್ಯದಲ್ಲಿರುವಾಗಲೇ ಆರೋಗ್ಯದಲ್ಲಿ ಏರುಪೇರಾಗಿದ್ದು ಅವರನ್ನು ತಕ್ಷಣವೇ ಚಿಕಿತ್ಸೆಗಾಗಿ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಾಗಿತ್ತು. ಎರಡು ದಿನಗಳ ಕಾಲ ಚಿಕಿತ್ಸೆ ಪಡೆದರೂ ಅವರ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡುಬಂದಿರಲಿಲ್ಲ.
ನಂಜಪ್ಪ ಈ ಹಿಂದೆ ಹೊಸನಗರ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಆಗಿ ಬಳಿಕ ಶಿವಮೊಗ್ಗದ ವಿನೋಬನಗರ ರಾಣೆಯಲ್ಲಿ ಕಾರ್ಯನಿರ್ವಹಿಸಿ ನಂತರ ಪದೋನ್ನತಿ ಹೊಂದಿ ಕುಂದಾಪುರದ ಕರಾವಳಿ ಕಾವಲು ಪಡೆ ಗಂಗೊಳ್ಳಿಯಲ್ಲಿ ವೃತ್ತ ನಿರೀಕ್ಷಕರಾಗಿ ಸುಮಾರು ಎರಡು ವರ್ಷಗಳಿಂದ ಕಾರ್ಯನಿರ್ವಹಿಸಿದ್ದರು ಬಳಿಕ ಕುಂದಾಪುರ ಟೌನ್ ಠಾಣೆಗೆ ವರ್ಗಾವಣೆಗೊಂಡು ಅಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ಮೃತರಿಗೆ ಇಬ್ಬರು ಮಕ್ಕಳಿದ್ದು ಪತ್ನಿ ಕೆಲ ವರ್ಷಗಳ ಹಿಂದೆ ತೀರಿಹೋಗಿದ್ದಾರೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.