ಕೆಸರು ಗದ್ದೆಯಂತಾದ ಹಳಿಯೂರು-ಬೆಳಕೋಡು ಸಂಪರ್ಕ ರಸ್ತೆ !

Written by Mahesha Hindlemane

Published on:

ರಿಪ್ಪನ್‌ಪೇಟೆ ; ಕಳೆದ ಐದಾರು ದಿನಗಳಿಂದ ಎಡಬಿಡದೇ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬೆಳಕೋಡು-ಗವಟೂರು ಸಂಪರ್ಕ ರಸ್ತೆ ಸಂಪೂರ್ಣ ಕೆಸರು ಗದ್ದೆಯಂತಾಗಿ ಸಾರ್ವಜನಿಕರು, ಶಾಲಾ-ಕಾಲೇಜ್ ವಿದ್ಯಾರ್ಥಿಗಳು ಓಡಾಡದಂತಾಗಿದ್ದು ಸಾಕಷ್ಟು ಬಾರಿ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಪ್ರಯೋಜವಾಗದ ಕಾರಣ ಗ್ರಾಮಸ್ಥರೇ ದುರಸ್ತಿಯಲ್ಲಿ ತೊಡಗುವಂತಾಗಿದೆ.

WhatsApp Group Join Now
Telegram Group Join Now
Instagram Group Join Now

ನಿತ್ಯ ಸುಮಾರು ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಓಡಾಡುವ ಮುಖ್ಯ ಸಂಪರ್ಕ ರಸ್ತೆಯಾಗಿದ್ದು ಅನಾರೋಗ್ಯ ಪೀಡಿತರು ಮತ್ತು ಗರ್ಭೀಣಿಯರು ಮತ್ತು ಶಾಲಾ-ಕಾಲೇಜ್ ವಿದ್ಯಾರ್ಥಿಗಳು ರಿಪ್ಪನ್‌ಪೇಟೆಗೆ ಬಂದು ಹೋಗುವ ಪ್ರಮುಖ ರಸ್ತೆ ಇದಾಗಿದ್ದು ಸಂಪೂರ್ಣ ಕೆಸರು ಗದ್ದೆಯಂತಾಗಿ ಯಾವುದೇ ವಾಹನಗಳು ಸಂಚರಿಸದ ಸ್ಥಿತಿ ನಿರ್ಮಾಣವಾಗಿದೆ.

ಗೋಲ್ಡನ್ ಸಿಟಿ ಲೇಔಟ್ ಅವೈಜ್ಞಾನಿಕ ನಿರ್ಮಾಣದಲ್ಲಿ ನಿರ್ಮಿಸಲಾಗಿರುವ ರಸ್ತೆ ಮತ್ತು ಬಾಕ್ಸ್ ಚರಂಡಿ ಮೂಲಕ ನೀರು ಹರಿದು ಈ ರಸ್ತೆಗೆ ನುಗ್ಗುವ ಪರಿಣಾಮದಿಂದಾಗಿ ಈ ರೀತಿ ಹಾಳಾಗಲು ಕಾರಣವೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೂ ಈ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಬಂದರೆ ಯಮಲೋಕ ಸೇರುವುದು ಗ್ಯಾರಂಟಿಯಾಗಿದೆ‌. ಇನ್ನಾದರೂ ಸಂಬಂಧಪಟ್ಟ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಇತ್ತ ಗಮನಹರಿಸಿ ತಕ್ಷಣ ಈ ಹಳಿಯೂರು-ಬೆಳಕೋಡು-ಗವಟೂರು ಸಂಪರ್ಕ ರಸ್ತೆ ದುರಸ್ಥಿ ಮಾಡುವರೇ ಕಾದು ನೋಡಬೇಕಾಗಿದೆ.

Leave a Comment