BPL Ration card:ಪ್ರಮುಖ ದಾಖಲೆಗಳಲ್ಲಿ ಒಂದಾಗಿರುವ ರೇಷನ್ ಕಾರ್ಡ್ ಬಡವರಿಗೆ ಮುಖ್ಯವಾಗಿ ನೀಡಲಾಗುತ್ತದೆ. ಆದರೇ ಅರ್ಹತೆ ಇಲ್ಲದ ಆರ್ಥಿಕವಾಗಿ ಸದೃಢವಾಗಿರುವ ಕುಟುಂಬಗಳಿಗೂ ಬಿಪಿಎಲ್ ಪಡಿತರ ಚೀಟಿಗಳು ಇವೆ. ಅರ್ಹತೆ ಇಲ್ಲದವರನ್ನು ತೆಗೆದು ಹಾಕಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ.
ಆರ್ಥಿಕವಾಗಿ ಸುಧಾರಿಸಿದವರಿಗೆ ಎಪಿಎಲ್ ಕಾರ್ಡ್ ಅನ್ನು ನೀಡಿತ್ತು. ಆದರೂ ಕೆಲವರು ಬಿಪಿಎಲ್ ಕಾರ್ಡ್ ಹೊಂದಿರುವವರು ಅದರ ಅರ್ಹತೆಯನ್ನು ಹೊಂದಿಲ್ಲದವರು ಹಾಗಾಗಿ ಇದೀಗ ಅನರ್ಹ ಪಡಿತರ ಚೀಟಿದಾರರಿಗೆ ಸಿಎಂ ಸಿದ್ದರಾಮಯ್ಯ ಬಿಗ್ ಶಾಕ್ ನೀಡಿದ್ದು, ಅನರ್ಹರ ಬಳಿಯಿರುವ ಪಡಿತರ ಕಾರ್ಡ್ಗಳನ್ನು ರದ್ದುಗೊಳಿಸುವಂತೆ ಸೂಚನೆ ನೀಡಿದ್ದಾರೆ.
ಸಿ.ಎಂ. ಸಿದ್ದರಾಮಯ್ಯ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿ ಸಿಇಒಗಳು, ಜಿಲ್ಲಾ ಪೊಲೀಸ್ ಅಧೀಕ್ಷಕರೊಂದಿಗೆ ಆರೋಗ್ಯ, ಕಂದಾಯ, ಗ್ರಾಮೀಣಾಭಿವೃದ್ಧಿ, ವಸತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ.
ರಾಜ್ಯದಲ್ಲಿ 1,53,69,945 ಪಡಿತರ ಚೀಟಿಗಳು ಇದ್ದು, 5,30,88,636 ಸದಸ್ಯ ಫಲಾನುಭವಿಗಳು ಇದ್ದಾರೆ. ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆ ಅಡಿಯಲ್ಲಿ ಕರ್ನಾಟಕದಲ್ಲಿ ಬೇರೆ ರಾಜ್ಯಗಳ 13,383 ಫಲಾನುಭವಿಗಳು ಪಡಿತರ ಸೌಲಭ್ಯವನ್ನು ಪಡೆಯುತ್ತಿದ್ದಾರೆಂಬ ಮಾಹಿತಿ ಇದೆ. ಈಗಾಗಲೇ ನಕಲಿ ದಾಖಲೆ ಸೃಷ್ಟಿಸಿ ಬಿಪಿಎಲ್ ಪಡೆದಂತಹವರ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿತ್ತು. ಅರ್ಹರಿಗೆ ಅನುಕೂಲ ಮಾಡಿಕೊಡಲು ಈ ಕ್ರಮವನ್ನು ತೆಗೆದುಕೊಂಡಿತ್ತು.
ತುಂಬಾ ಜನರು ಅನರ್ಹರು ಬಿಪಿಎಲ್ ಕಾರ್ಡ್ಗಳನ್ನು ಪಡೆದಿರುವುದು ತಿಳಿದು ಬಂತು. ಆಗ ಸರ್ಕಾರ ಅವರೆಲ್ಲರ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಿ ಎಪಿಎಲ್ ಕಾರ್ಡ್ಗಳಾಗಿ ಬದಲಾಯಿಸುವ ಕೆಲಸ ಮಾಡಿತ್ತು. ಆದರೂ ಈಗಲೂ ಕೆಲ ಅನರ್ಹರು ಅಂದರೆ ಆರ್ಥಿಕವಾಗಿ ಅನುಕೂಲವಾಗಿದ್ದರೂ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದಾರೆ. ಸರ್ಕಾರ ಎಚ್ಚರಿಕೆಯನ್ನು ನೀಡುತ್ತಿದ್ದು ಇನ್ನು ಮುಂದೆ ಅನರ್ಹರ ಬಿಪಿಎಲ್ ಕಾರ್ಡ್ನ್ನು ಸರ್ಕಾರ ರದ್ದುಮಾಡಲಿದೆ.
Read More
ಆಸ್ತಿ ಮತ್ತು ಭೂಮಿ ನೊಂದಣಿಯಲ್ಲಿ ಹೊಸ ನಿಯಮ ಜಾರಿಗೆ!
ಈ 14 ಬೆಳೆಗಳ ಕನಿಷ್ಠ ಬೆಂಬಲ ಬೆಲೆಯಲ್ಲಿ ಏರಿಕೆ: ಮಹತ್ವದ ನಿರ್ಣಯ ಮಾಡಿದ ಕೇಂದ್ರ ಸಂಪುಟ!