ಚಿಕ್ಕಮಗಳೂರು ಜಿಲ್ಲಾ ಸುದ್ದಿ ಶಿವಮೊಗ್ಗ

ಸರ್ಕಾರದಿಂದ ಶಾಲಾ ಮಕ್ಕಳಿಗೆ ‘ಕೋವಿಡ್’ ಮಾರ್ಗಸೂಚಿ :ಜ್ವರ, ಕೆಮ್ಮು, ನೆಗಡಿ ಇದ್ರೆ ಮಕ್ಕಳನ್ನು ಶಾಲೆಗೆ ಕಳುಹಿಸಬೇಡಿ!

ರಾಜ್ಯಾದ್ಯಂತ 29.05.2025 ರಂದು ಪುನರಾರಂಭವಾಗುವ ಶೈಕ್ಷಣಿಕ ವರ್ಷದ ಹಿನ್ನೆಲೆ, ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳು ಆರಂಭವಾಗುತ್ತವೆ. ಆದರೆ, ಪ್ರಸ್ತುತ ರಾಜ್ಯದಲ್ಲಿ ಕೋವಿಡ್-19 ಪರಿಸ್ಥಿತಿಯ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಕೆಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಶಾಲೆಗಳಲ್ಲಿ ಈ ಕ್ರಮಗಳನ್ನು ಅನುಸರಿಸಲು ಸಂಬಂಧಿಸಿದಂತೆ ಉಲ್ಲೇಖಿತ ಪತ್ರದಲ್ಲಿ ಸೂಚನೆಗಳನ್ನು ನೀಡಲಾಗಿದೆ. ಆಗುವ ಮುಂದಿನ ಶಿಕ್ಷಣ ಕಾರ್ಯಗಳಲ್ಲಿ, ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿ ಈ ಕೆಳಗಿನ ಸೂಚನೆಗಳನ್ನು ಪಾಲಿಸಲು ತಿಳಿಸಲಾಗುತ್ತಿದೆ.

1) ಶಾಲಾ ಮಕ್ಕಳಲ್ಲಿ ಜ್ವರ, ಕೆಮ್ಮು, ನೆಗಡಿ ಹಾಗೂ ಇತರ ಲಕ್ಷಣಗಳು ಕಂಡುಬಂದಾಗ, ಮಕ್ಕಳನ್ನು ಶಾಲೆಗೆ ಕಳುಹಿಸದೇ, ವೈದ್ಯರ ಸಲಹೆಯಂತೆ ಸೂಕ್ತ ಚಿಕಿತ್ಸೆ ಮತ್ತು ಆರೈಕಾ ಕ್ರಮಗಳನ್ನು ಅನುಸರಿಸಬೇಕು.

2) ಈ ಲಕ್ಷಣಗಳು ಸಂಪೂರ್ಣವಾಗಿ ಗುಣಮುಖವಾದ ನಂತರ ಮಾತ್ರ ಮಕ್ಕಳನ್ನು ಶಾಲೆಗೆ ಕಳುಹಿಸಬೇಕು.

3) ಜ್ವರ, ಕೆಮ್ಮು, ನೆಗಡಿ ಮತ್ತು ಇತರ ಲಕ್ಷಣಗಳಿರುವ ಮಕ್ಕಳು ಶಾಲೆಗೆ ಬಂದಾಗ, ಪೋಷಕರಿಗೆ ಮಾಹಿತಿ ನೀಡಬೇಕು ಮತ್ತು ಅಂತಹ ಮಕ್ಕಳನ್ನು ಸುರಕ್ಷಿತವಾಗಿ ಪೋಷಕರೊಂದಿಗೆ ಮನೆಗೆ ಕಳುಹಿಸಬೇಕು.

4) ಶಾಲಾ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಯಲ್ಲಿ ಜ್ವರ, ಕೆಮ್ಮು, ನೆಗಡಿ ಮತ್ತು ಇತರ ಲಕ್ಷಣಗಳು ಕಂಡುಬಂದಾಗ, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು.

5) ಶಾಲಾ ಅವಧಿಯಲ್ಲಿ ಮುಂಜಾಗ್ರತಾ ಕ್ರಮಗಳಾದ ಸಾಮಾನ್ಯ ಸ್ವಚ್ಛತೆಯ ಜೊತೆಗೆ, ಕೈಗಳ ಸ್ವಚ್ಚತೆ ಮತ್ತು ಕೆಮ್ಮುವಾಗ ಅಥವಾ ಸೀನುವಾಗ ಎಚ್ಚರಿಕೆ ವಹಿಸುವುದು ಅತ್ಯಂತ ಮಹತ್ವದ್ದು.

Covide-19-1
Covide-19-2

Read More

ಸರ್ಕಾರಿ ನೌಕರರೇ ಇದನ್ನ ಗಮನಿಸಿ: ಆರೋಗ್ಯ ಸಂಜೀವಿನಿ ಯೋಜನೆಗೆ ಈ ದಾಖಲೆಗಳು ಕಡ್ಡಾಯ!

ಸುಲಭವಾಗಿ ಇ-ಸ್ವತ್ತು ದಾಖಲೆಯನ್ನು ನಿಮ್ಮ ಮೊಬೈಲ್ನಲ್ಲೇ ಉಚಿತವಾಗಿ ಪಡೆಯಬಹುದು.

Leave a Comment