ರೈತರಿಗೆ ಉಚಿತ ಬೋರ್‌ವೆಲ್‌ ಕೊರೆಸಲು ಅರ್ಜಿ ಆಹ್ವಾನ! ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ ಮಾಹಿತಿ

Written by Koushik G K

Published on:

Ganga kalyana scheme : ಕರ್ನಾಟಕ ಸರ್ಕಾರ ವಿವಿಧ ಅಭಿವೃದ್ಧಿ ನಿಗಮಗಳ ಮೂಲಕ ರಾಜ್ಯದ ಜನರಿಗೆ ಏಕಕಾಲದಲ್ಲಿ ಹಲವಾರು ಪ್ರಯೋಜನಗಳನ್ನು ಒದಗಿಸುತ್ತಿದೆ. ಪ್ರತಿ ವರ್ಷದಂತೆ, ಈ ವರ್ಷವೂ ಉಚಿತ ಬೋರ್‌ವೆಲ್‌ಗಾಗಿ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ.

WhatsApp Group Join Now
Telegram Group Join Now
Instagram Group Join Now

ಗಂಗಾ ಕಲ್ಯಾಣ ಯೋಜನೆ

ಅಂಬೇಡ್ಕರ್ ಅಭಿವೃದ್ಧಿ ನಿಗಮ, ವಾಲ್ಮೀಕಿ ಅಭಿವೃದ್ಧಿ ನಿಗಮ, ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಮುಂತಾದ ವಿಭಿನ್ನ ನಿಗಮಗಳ ಮೂಲಕ ವಿವಿಧ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಇದೀಗ ರೈತರಿಗೆ ಉಚಿತ ಬೋರ್ ವೆಲ್ ಕೊರೆದು ಕೊಡುವುದಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ಈ ಸೌಲಭ್ಯವನ್ನು ಒದಗಿಸಲಾಗುತ್ತದೆ. ಅರ್ಹ ರೈತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೂಲಕ ಈ ಲಾಭವನ್ನು ಪಡೆಯಬಹುದು.

ವಿವಿಧ ನಿಗಮಗಳಲ್ಲಿ ಈ ಯೋಜನೆಯನ್ನು ಕಾರ್ಯಗತಗೊಳಿಸಲಾಗಿದೆ. ಸಣ್ಣ ಮತ್ತು ಅತಿ ಸಣ್ಣ ಜಮೀನು ಹಿಡಿದವರಾದವರು ಇದರ ಬಗ್ಗೆ ಅರ್ಜಿ ಸಲ್ಲಿಸಿ ಇದರ ಪ್ರಯೋಜನವನ್ನು ಪಡೆಯಬಹುದು. ಬೋರ್ ವೆಲ್ ಕೊರೆಸುವುದರಿಂದ ಹಿಡಿದು, ಎಲ್ಲಾ ರೀತಿಯ ವಿದ್ಯುತ್ ಸಂಪರ್ಕವನ್ನು ಕಲ್ಪಿಸುವ ಮೂಲಕ ನಿಮ್ಮ ಜಮೀನಿಗೆ ನೀರಿನ ಕೊರತೆಯನ್ನು ಪೂರೈಸುವ ಮೂಲಕ ಈ ಯೋಜನೆ ಸಹಾಯ ಮಾಡುತ್ತದೆ.

ಗಂಗಾ ಕಲ್ಯಾಣ ಯೋಜನೆ ಸಹಾಯಧನ ಎಷ್ಟು?

ಅರ್ಹ ರೈತರಿಗೆ ₹1.5 ಲಕ್ಷದಿಂದ ₹3.50 ಲಕ್ಷದವರೆಗೆ ಸಹಾಯಧನ ನೀಡಲಾಗುತ್ತದೆ. ಇದಲ್ಲದೆ, ಜಾತಿ ಆಧಾರದಲ್ಲಿ ಸಬ್ಸಿಡಿಯು ಲಭ್ಯವಿದೆ. ಹಾಗಾದರೆ, ಅರ್ಜಿ ಸಲ್ಲಿಸಲು ಯಾರು ಅರ್ಹರಾಗಿದ್ದಾರೆ ಎಂಬುದರ ಬಗ್ಗೆ ತಿಳಿಯೋಣ.

ಅರ್ಜಿದಾರರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗದವರಾಗಿರಬೇಕು.
ಅರ್ಜಿದಾರರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದವರು ವಾರ್ಷಿಕ ಆದಾಯ ₹1.5 ಲಕ್ಷಕ್ಕಿಂತ ಹೆಚ್ಚು ಇರುವ ಹಾಗಿಲ್ಲನಗರ ಪ್ರದೇಶದವರಿಗೆ ವಾರ್ಷಿಕ ಆದಾಯ ₹2 ಲಕ್ಷಕ್ಕಿಂತ ಹೆಚ್ಚು ಇರುವಾಗಿಲ್ಲ.ಕನಿಷ್ಠ 21 ವರ್ಷ ವಯಸ್ಸಾಗಿರಬೇಕು.ಜಮೀನು ಹಿಡುವಳಿಯ ಪ್ರಮಾಣ ಹೊಂದಿರಬೇಕು.1.20 ಎಕರೆಯಿಂದ 5 ಎಕರೆ ಒಳಗೆ ಜಮೀನು ಹೊಂದಿರಬೇಕು.

ಅರ್ಜಿ ಸಲ್ಲಿಸುವುದು ಹೇಗೆ?ಅಭ್ಯರ್ಥಿಗಳು ತಮ್ಮ ಅಗತ್ಯ ದಾಖಲೆಗಳನ್ನು ಹೊಂದಿದ್ದು, ಸೇವಾಸಿಂದು ಮೂಲಕ ಅರ್ಜಿ ಸಲ್ಲಿಸಲು ಅಗತ್ಯವಿದೆ. ಇದಕ್ಕಾಗಿ ನೀವು ಕಂಪ್ಯೂಟರ್ ಸೆಂಟರ್‌ಗಳಿಗೆ ಭೇಟಿ ನೀಡಬಹುದು. ನೀವು ಯಾವುದೇ ಸಮಸ್ಯೆ ಎದುರಿಸುತ್ತಿದ್ದರೆ, ಕಲ್ಯಾಣ ಮಿತ್ರ 24 ಗಂಟೆಗಳ ಸಹಾಯವಾಣಿ (9482300400) ಮೂಲಕ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.

Leave a Comment