ಶಿವಮೊಗ್ಗದ ಮೆಗ್ಗಾನ್ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಅಗತ್ಯವಿರುವ ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುವ ಕಾರಣದಿಂದ, ಇಂದು ಜೂನ್ 11 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಶಿವಮೊಗ್ಗದ ಕೆಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ ?
ಹೊಸಮನೆ, ಹೊಸಮನೆ ಚಾನಲ್ ಏರಿಯಾ, ಶರಾವತಿ ನಗರ ಎ ಮತ್ತು ಬಿ ಬ್ಲಾಕ್, ಆಯುರ್ವೇದ ಕಾಲೇಜು, ಕುವೆಂಪು ರಸ್ತೆ, ಸಾಗರ ರಸ್ತೆ, ಆಯನೂರು ಗೇಟ್, ಆದಿಚುಂಚನಗಿರಿ ಸಮುದಾಯ ಭವನ.ಯುನಿಟಿ ಆಸ್ಪತ್ರೆ, ಜೈಲ್ ವೃತ್ತ, ಸುಬ್ಬಯ್ಯ ಆಸ್ಪತ್ರೆ, ಜೈಲ್ ರಸ್ತೆ, ನಂಜಪ್ಪ ಆಸ್ಪತ್ರೆ, ಮ್ಯಾಕ್ಸ್ ಆಸ್ಪತ್ರೆ, ಶಿವಮೂರ್ತಿ ವೃತ್ತ.ಸತ್ಯಂ ಫೋರ್ವಿಂಗ್ಸ್, ಎ.ಆರ್.ಬಿ ಕಾಲೊನಿ, ಅಶೋಕ ನಗರ, ಪಂಪ ನಗರ, ರಂಗನಾಥ ಬಡಾವಣೆ, ಮಿಳಘಟ್ಟ, ಟಿಪ್ಪುನಗರ ಬಲಭಾಗ, ಬಿ.ಎಸ್.ಎನ್.ಎಲ್ ಭವನ, ದುರ್ಗಿಗುಡಿ, ಜಿಲ್ಲಾ ಪಂಚಾಯಿತಿ ಕಚೇರಿ, ತಿಲಕ್ ನಗರ, ಆರ್.ಎಂ.ಆರ್ ರಸ್ತೆ, ಜಯನಗರ, ಬಸವನಗುಡಿ, ಜಿಲ್ಲಾಧಿಕಾರಿ ಕಚೇರಿ, ಎ.ಎನ್.ಕೆ ರಸ್ತೆ, ಅಚ್ಯುತ್ ರಾವ್ ಬಡಾವಣೆ, ಸವಳಂಗ ರಸ್ತೆ, ರಾಘವೇಂದ್ರ ಸ್ವಾಮಿ ಮಠ ಸುತ್ತಮುತ್ತಲಿನ ಪ್ರದೇಶಗಳು.
Read More
ಅಡಿಕೆ ಧಾರಣೆ | 10 june 2025 |ಇಂದಿನ ಅಡಿಕೆ ರೇಟ್ ಹೇಗಿದೆ?
ತೀರ್ಥಹಳ್ಳಿ ವಕೀಲರ ಮೇಲೆ ಹಲ್ಲೆ ; ಹೊಸನಗರದಲ್ಲಿ ಕಲಾಪ ಬಹಿಷ್ಕಾರ
MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650