ಸಿಗಂದೂರು ಸೇತುವೆ ಬಳಿ ಗೇಟ್ ಸಿಬ್ಬಂದಿಗೆ ಮಚ್ಚು ತೋರಿ ಬೆದರಿಸಿದ ಪ್ರವಾಸಿಗ !

Written by Koushik G K

Published on:

ಶಿವಮೊಗ್ಗ ಜಿಲ್ಲೆಯ ಪ್ರಸಿದ್ಧ ಸಿಗಂದೂರು ಸೇತುವೆಯ ಭಾಗದಲ್ಲಿ ಪ್ರವಾಸಿಗನೊಬ್ಬ ಗೇಟ್ ಸಿಬ್ಬಂದಿಗೆ ಮಚ್ಚು ತೋರಿಸಿ ಬೆದರಿಸಿದ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಧಾರವಾಡ ಮೂಲದ ವ್ಯಕ್ತಿಯೊಬ್ಬನು ತನ್ನ ಕುಟುಂಬದೊಂದಿಗೆ ಕಾರಿನಲ್ಲಿ ಸಿಗಂದೂರಿಗೆ ಪ್ರವಾಸಕ್ಕೆ ಬಂದಿದ್ದ. ಗೇಟ್ ಬಳಿ ವಾಹನಗಳನ್ನು ಸರದಿಯಲ್ಲಿ ಬಿಡುವ ವಿಚಾರದಲ್ಲಿ ಗೇಟ್ ಸಿಬ್ಬಂದಿಯೊಂದಿಗೆ ಮಾತಿನ ಚಕಮಕಿ ನಡೆದಿದೆ. ಈ ಸಂದರ್ಭ ಆತ ತನ್ನ ಕಾರಿನಿಂದ ಮಚ್ಚು ತೆಗೆದು ತೋರಿಸಿ ಬೆದರಿಸಿರುವ ಘಟನೆ ನಡೆದಿದೆ.

ತಕ್ಷಣ ಗೇಟ್ ಸಿಬ್ಬಂದಿ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಆರೋಪಿತ ಪ್ರವಾಸಿಗನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಆದರೆ ಗೇಟ್ ಸಿಬ್ಬಂದಿಯಿಂದ ಲಿಖಿತ ದೂರು ಸಲ್ಲಿಸಲ್ಪಡದ ಹಿನ್ನೆಲೆಯಲ್ಲಿ, ಪೊಲೀಸರು ಪ್ರವಾಸಿಗನಿಗೆ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.

Read More

Adhaar Card : 3 ದಿನಗಳಲ್ಲಿ ಈ ಕೆಲಸ ಮಾಡಿ ಇಲ್ಲವಾದಲ್ಲಿ ಪಾವತಿಸಬೇಕು ಇಷ್ಟು ಹಣ !

SSC ನೇಮಕಾತಿ 2025: ಒಟ್ಟು 14,582 ಹುದ್ದೆಗಳಿಗೆ ಅರ್ಜಿ ಆಹ್ವಾನ !

Leave a Comment