ತಮ್ಮಡಿಕೊಪ್ಪ ಸಂಪರ್ಕ ರಸ್ತೆ ಒತ್ತುವರಿ ಅಧಿಕಾರಿಗಳಿಂದ ತೆರವು

Written by Mahesh Hindlemane

Published on:

ರಿಪ್ಪನ್‌ಪೇಟೆ ; ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದ ಸರ್ವೇ ನಂ 40 ಮತ್ತು 42/2 ಹಾಗೂ 57 ಇನ್ನಿತರ ಜಮೀನಿಗೆ ಸಂಪರ್ಕ ಕಲ್ಪಿಸುವ ಸಂಪರ್ಕದ ರಸ್ತೆಯನ್ನು ಒತ್ತುವರಿ ನೆಪದಲ್ಲಿ ರಸ್ತೆಗೆ ಮಣ್ಣು ಹಾಕಿ ಬಂದ್ ಮಾಡುವ ಮೂಲಕ ರೈತರಿಗೆ ಕೃಷಿ ಚಟುವಟಿಕೆಗೆ ಹೋಗಿ ಬಾರದಂತೆ ತಡೆಮಾಡಿದ್ದಾರೆಂಬ ದೂರಿನ ಮೇರೆಗೆ ಅರಸಾಳು ಗ್ರಾಮ ಪಂಚಾಯ್ತಿ ಆಭಿವೃದ್ದಿ ಆಧಿಕಾರಿಗಳು ಮತ್ತು ಗ್ರಾಮಾಡಳಿತ ಹಾಗೂ ಪಿಎಸ್‌ಐ ತೆರವುಗೊಳಿಸುವ ಮೂಲಕ ಸಾರ್ವಜನಿಕರಿಗೆ ಜಮೀನು ಕೃಷಿ ಚಟುವಟಿಕೆಗೆ ಮುಕ್ತಗೊಳಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಈ ಕೂಡಲೇ ಬಂದ್ ಮಾಡಲಾದ ಸಂಪರ್ಕ ರಸ್ತೆಯನ್ನು ತೆರವುಗೊಳಿಸಿ ರೈತರಿಗೆ ಈ ಹಿಂದಿನಂತೆ ಕೃಷಿ ಚಟುವಟಿಕೆಗೆ ಜನ-ಜಾನುವಾರುಗಳಿಗೆ ಓಡಾಡಲು ಅನುಕೂಲ ಮಾಡಿಕೊಟ್ಟ ಜಿಲ್ಲಾಧಿಕಾರಿಗಳಿಗೆ, ಜಿಲ್ಲಾ ರಕ್ಷಣಾಧಿಕಾರಿಗಳಿಗೆ, ತಹಶೀಲ್ದಾರ್ ಮತ್ತು ಪಿಎಸ್‌ಐರಿಗೆ ತಮ್ಮಡಿಕೊಪ್ಪ ಗ್ರಾಮದ ರೈತರಾದ ಪರಶೋಜಿರಾವ್, ಶ್ರೀನಿವಾಸರಾವ್, ಅನಿಲ್‌ಕುಮಾರ್, ಹರ್ಷ, ಕೃಷ್ಣೋಜಿರಾವ್, ಅಭಿನಂದಿಸಿದ್ದಾರೆ.

Leave a Comment