Sigandur Bridge: ದಶಕಗಳ ಕಾತರತೆಗೆ ಲೋಕಾರ್ಪಣೆಯ ಕ್ಷಣಗಣನೆ !

Written by Koushik G K

Updated on:

Sigandur Bridge: ಮಲೆನಾಡು ತನ್ನ ನೈಸರ್ಗಿಕ ಸೌಂದರ್ಯ ಹಾಗೂ ಪ್ರಾಕೃತಿಕ ಸಂಪತ್ತಿನಿಂದಲೇ ವಿಶ್ವದ ಗಮನ ಸೆಳೆದಿದೆ. ಈ ಮಲೆನಾಡ ಹಚ್ಚ ಹಸಿರು ಪ್ರದೇಶದ ಹೃದಯ ಭಾಗವಾದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಶರಾವತಿ ನದಿಯ ಹಿನ್ನೀರಿನ ಅಂಬಾರಗೋಡ್ಲು – ಕಳಸವಳ್ಳಿ ನಡುವಿನ ಪ್ರದೇಶಕ್ಕೆ ನಿರ್ಮಾಣವಾಗಿರುವ ಸಿಗಂದೂರು ಸೇತುವೆ,ರಾಜ್ಯಕ್ಕೆ ಮಾತ್ರವಲ್ಲದೆ ದೇಶಕ್ಕೂ ಹೆಮ್ಮೆ ತಂದ ಮಹತ್ವದ ಯೋಜನೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

430 ಕೋಟಿ ರೂ. ವೆಚ್ಚದಲ್ಲಿ 2.44 ಕಿ.ಮೀ ಉದ್ದದ ಕೇಬಲ್ ಆಧಾರಿತ ಸೇತುವೆ ರೂಪುಗೊಂಡಿದ್ದು, ಇದು ಕರ್ನಾಟಕದ ಅತೀ ಉದ್ದದ ಇನ್‌ಲ್ಯಾಂಡ್ ಕೇಬಲ್ ಸ್ಟೇಡ್ ಬ್ರಿಡ್ಜ್ ಆಗಿದೆ. ಅತ್ಯಾಧುನಿಕ ತಂತ್ರಜ್ಞಾನದಲ್ಲಿ ನಿರ್ಮಾಣಗೊಂಡ ಈ ಸೇತುವೆ ಸಂಪರ್ಕದ ನೆಲೆ ರೂಪಿಸುತ್ತಿದೆ. ಇತ್ತೀಚೆಗೆ ಸೇತುವೆಯಲ್ಲಿ ಲೋಡ್ ಟೆಸ್ಟಿಂಗ್ ಕೂಡ ಯಶಸ್ವಿಯಾಗಿ ಪೂರ್ಣಗೊಂಡಿದೆ.

ಸಂಪರ್ಕದ ಹೊಸ ಅಧ್ಯಾಯ

ಈ ಸೇತುವೆಯ ಮೂಲಕ ಶರಾವತಿ ಹಿನ್ನೀರದ ಇತರ ಭಾಗಗಳನ್ನು ಸಂಪರ್ಕಿಸಲು ಸಾಧ್ಯವಾಗಲಿದ್ದು, ಇದು ಸ್ಥಳೀಯ ನಾಗರಿಕರಿಗೆ ಮಾತ್ರವಲ್ಲದೆ ಪ್ರವಾಸೋದ್ಯಮಕ್ಕೂ ಮಹತ್ವದ ಬದಲಾವಣೆಯಾಗಲಿದೆ.

ಕೃತಜ್ಞತೆ ವ್ಯಕ್ತಪಡಿಸಿದ ಸಂಸದರು

ಈ ಐತಿಹಾಸಿಕ ಯೋಜನೆಯು ದಶಕಗಳಿಂದ ಜನತೆಯ ಕನಸು ಆಗಿದ್ದಿದ್ದು, ಇಂದು ಲೋಕಾರ್ಪಣೆಯ ಸುಸಂದರ್ಭವನ್ನು ಎದುರುನೋಡುತ್ತಿರುವುದು ಸಂತೋಷದ ಸಂಗತಿ. ಈ ಮಹತ್ವದ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಶ್ರಮಿಸಿದವರಲ್ಲಿ ಪೂಜ್ಯ ತಂದೆಯವರಾದ ಬಿ.ಎಸ್. ಯಡಿಯೂರಪ್ಪ ಅವರ ಪಾತ್ರ ಅಮೂಲ್ಯವಾಗಿದೆ. ಅವರ ದೂರದೃಷ್ಟಿ ಹಾಗೂ ನಿರಂತರ ಸಾದ್ಧ್ಯತೆಯ ಶ್ರಮದಿಂದ ಈ ಸೇತುವೆ ಇಂದು ಸಾಕಾರವಾಗುತ್ತಿದೆ.

ಇದೇ ವೇಳೆ, ಈ ಯೋಜನೆಗೆ ಅಗತ್ಯವಾದ ಅನುದಾನ ಒದಗಿಸಿ, ಮಲೆನಾಡು ಮತ್ತು ನಾಡಿನ ಸಂಪರ್ಕ ವ್ಯವಸ್ಥೆಗೆ ಬಲವರ್ಧನೆ ನೀಡಿದ ಪ್ರಧಾನಿ ನರೇಂದ್ರ ಮೋದಿ, ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಧನ್ಯವಾದಗಳನ್ನ ವ್ಯಕ್ತಪಡಿಸಿದ್ದಾರೆ.

https://www.facebook.com/share/p/12KCh3pCSHo

Read More :ಸಿಗಂದೂರು ಸೇತುವೆಯಲ್ಲಿ ಲೋಡ್ ಟೆಸ್ಟಿಂಗ್ ಪೂರ್ಣ!ಸಂಪರ್ಕದ ಹೊಸ ಅಧ್ಯಾಯದ ಪ್ರಾರಂಭಕ್ಕೆ ಕ್ಷಣಗಣನೆ !

Leave a Comment