Karnataka Rain: ರಾಜ್ಯದಾದ್ಯಂತ ಮುಂಗಾರು ಮಳೆ ತನ್ನ ಅಬ್ಬರ ತೋರಿಸಲು ಸಜ್ಜಾಗಿದೆ. ಹವಾಮಾನ ಇಲಾಖೆ ಮುಂಜಾಗ್ರತಾ ಕ್ರಮವಾಗಿ ಹಲವು ಜಿಲ್ಲೆಗಳಿಗೆ ಎಚ್ಚರಿಕೆ ಘೋಷಿಸಿದೆ.
ಕೊಡಗು ಜಿಲ್ಲೆಗೆ ರೆಡ್ ಅಲರ್ಟ್: ಭಾರೀ ಮಳೆಯ ಸಾಧ್ಯತೆ ಇರುವ ಕಾರಣ ರೆಡ್ ಅಲರ್ಟ್ ಘೋಷಿಸಲಾಗಿದೆ.
ಆರೆಂಜ್ ಅಲರ್ಟ್: ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯ ಸಾಧ್ಯತೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಯೆಲ್ಲೋ ಅಲರ್ಟ್: ಧಾರವಾಡ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಧ್ಯಮ ಮಳೆಯ ನಿರೀಕ್ಷೆಯಿದೆ. ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಲಾಗಿದೆ.
ವಿಜಯನಗರ, ತುಮಕೂರು, ರಾಮನಗರ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಬೀದರ್ ಸೇರಿದಂತೆ ಬಹುತೇಕ ಪ್ರದೇಶಗಳಲ್ಲಿ ಮಳೆಯಾಗಲಿದೆ.
Read More :ಮುಂದುವರೆದ ಮಳೆ ಅಬ್ಬರ ; ತೀರ್ಥಹಳ್ಳಿ ತಾಲೂಕಿನಾದ್ಯಂತ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ