ರಿಪ್ಪನ್ಪೇಟೆ ; ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಶಿವಮೊಗ್ಗ-ಹೊಸನಗರ ಸಿದ್ದಪ್ಪನಗುಡಿ ಲಿಂಕ್ ರಸ್ತೆ ಸಂಪೂರ್ಣ ಕೆಸರು ಗದ್ದೆಯಂತಾಗಿ ಓಡಾಡದಂತಾಗಿದೆ.
ಮೊನ್ನೆ ದಿನ ಈ ಸಂಪರ್ಕ ರಸ್ತೆಯ ನಿವಾಸಿಯೊಬ್ಬರಿಗೆ ಆರೋಗ್ಯ ಸರಿಯಿಲ್ಲದ ಕಾರಣ ಆಸ್ಪತ್ರೆಗೆ ಕರೆತರಲು ಹೋದಾಗ ಹೊಂಡ ಗುಂಡಿ ಬಿದ್ದು ಭಾರಿ ಮಳೆಯಿಂದಾಗಿ ರಸ್ತೆ ಕೆಸರುಗದ್ದೆಯಂತಾಗಿ ರೋಗಿಯನ್ನು ಕರೆತರಲು ಹೋದ ಆಟೋ ಕೆಸರಿನಲ್ಲಿ ಸಿಕ್ಕಿಕೊಂಡು ಗಂಟೆಗಟ್ಟಲೆ ಒದ್ದಾಡಿ ಕೊನೆಗೆ ರೋಗಿಯನ್ನು ಹೊತ್ತ ತರುವುದರಲ್ಲಿ ಹರಸಾಹಸ ಪಡುವಂತಾಗಿ ಹೈರಣಾಗಿದ್ದಾರೆ.
ಇನ್ನಾದರೂ ಈ ಕಚ್ಚಾ ರಸ್ತೆಗೆ ಜಲ್ಲಿ ಹಾಕಿ ಸಾರ್ವಜನಿಕರಿಗೆ ಮುಕ್ತವಾಗಿ ಓಡಾಡಲು ಸುಸಜ್ಜಿತ ರಸ್ತೆ ಮಾಡಿಕೊಡುವಂತೆ ಲಿಂಕ್ ರಸ್ತೆಯ ನಿವಾಸಿಗಳು ಆಗ್ರಹಿಸಿದ್ದಾರೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.