ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು !
ಶಿವಮೊಗ್ಗ : ತಾಲೂಕಿನ ಕೆಸವಿನಕಟ್ಟೆ ಗ್ರಾಮದ ಮ್ಯಾದಿನ ಕೆರೆಯಲ್ಲಿ ಶನಿವಾರ ಸಂಜೆ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲಾಗಿದ್ದಾರೆ.
ಸೈಯದ್ (13), ಫೈಸಲ್ (13) ಮೃತ ಬಾಲಕರು. ಮೃತ ಇಬ್ಬರು ಬಾಲಕರು ಹಾರನಹಳ್ಳಿಯ ಸರ್ಕಾರಿ ಉರ್ದು ಶಾಲೆಯ 8 ನೇ ತರಗತಿಯಲ್ಲಿ ಓದುತ್ತಿದ್ದಾರೆ.
ಘಟನೆ ಕುರಿತು ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.