ಶಿವಮೊಗ್ಗ : ತಾಲೂಕಿನ ಕುಂಸಿ ಸಮೀಪದ ಚಿಕ್ಕಮರಸ ಗ್ರಾಮದಲ್ಲಿ ಜೂನ್ 29ರ ರಾತ್ರಿ 9 ರಿಂದ 10 ಗಂಟೆಯ ಮಧ್ಯೆ ಭೀಕರ ಕೊ**ಲೆ ನಡೆದಿದೆ. ಮಚ್ಚಿನಿಂದ ಹೊಡೆದು ವ್ಯಕ್ತಿಯೋರ್ವನನ್ನು ನಿರ್ದಯವಾಗಿ ಕೊ**ಲೆ ಹಾಕಲಾಗಿದೆ.
ಕೊ*ಲೆಗೀಡಾದ ವ್ಯಕ್ತಿಯನ್ನು ವಸಂತ್ (34) ಎಂದು ಗುರುತಿಸಲಾಗಿದೆ. ಕುಂಸಿ ಗ್ರಾಮದ ನಿವಾಸಿಯಾಗಿದ್ದು, ಕೂಲಿ ಕೆಲಸಮಾಡುತ್ತಾ ಜೀವನ ಸಾಗಿಸುತ್ತಿದ್ದರು. ವಿವಾಹಿತನಾಗಿದ್ದ ವಸಂತ್ ಭೀಕರವಾಗಿ ಕೊ*ಲೆಗೀಡಾಗಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ.
ಘಟನೆ ನಡೆದ ನಂತರ ಕೂಡಲೇ ಇನ್ಸ್ಪೆಕ್ಟರ್ ದೀಪಕ್ ಹಾಗೂ ಅವರ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಸಂತನ ಕೊ**ಲೆಗೆ ನಿಖರವಾದ ಕಾರಣಗಳು ಇನ್ನೂ ಬಹಿರಂಗವಾಗಿಲ್ಲ. ಆದರೂ, ಸ್ಥಳೀಯ ಮೂಲಗಳಿಂದ ದೊರಕಿದ ಮಾಹಿತಿಯ ಪ್ರಕಾರ, ಕುಂಸಿ ಗ್ರಾಮದ ಇಬ್ಬರು ವ್ಯಕ್ತಿಗಳು ಈ ಕೃತ್ಯದಲ್ಲಿ ಭಾಗವಹಿಸಿದ್ದಾಗಿ ಶಂಕಿಸಲಾಗಿದೆ.
ಕೃತ್ಯ ನಡೆದಿದೆ ನಂತರ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಪತ್ತೆಗಾಗಿ ಪೊಲೀಸರು ಸಕ್ರೀಯ ಕ್ರಮಗಳನ್ನು ಕೈಗೊಂಡಿದ್ದಾರೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
Read more :ರಿಪ್ಪನ್ಪೇಟೆ ; ಕರ್ನಾಟಕ ಕಾರ್ಮಿಕ ಪರಿಷತ್ ವತಿಯಿಂದ ನೂತನ ಪಿಎಸ್ಐಗೆ ಸನ್ಮಾನ
ಅವರು MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 2019ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಅವರು ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ. ಅವರು ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.