ತೀರ್ಥಹಳ್ಳಿ:ತೀರ್ಥಹಳ್ಳಿ ಜೆಸಿ ಆಸ್ಪತ್ರೆಯಲ್ಲಿನ ವೈದ್ಯರ ವರ್ಗಾವಣೆ ಭಾರೀ ಚರ್ಚೆಗೆ ಕಾರಣವಾಗಿದ್ದರ ನಡುವೆ ರಾಜ್ಯ ಸರ್ಕಾರ 5 ಹೊಸ ವೈದ್ಯರನ್ನು ನೇಮಕಗೊಳಿಸಿರುವ ಮಹತ್ವದ ಆದೇಶ ನೀಡಿದೆ. ಈ ಮೂಲಕ ಆರೋಗ್ಯ ಸೇವೆಗಳನ್ನು ಪುನಃ ಸಮರ್ಪಕವಾಗಿ ಸ್ಥಾಪಿಸಲು ಕ್ರಮ ಕೈಗೊಂಡಿದೆ.
ಈ ನೇಮಕಾತಿಯಲ್ಲಿ ಮೂವರು ವೈದ್ಯರು ಕೌನ್ಸಿಲಿಂಗ್ ಪ್ರಕ್ರಿಯೆ ಮೂಲಕ ಆಯ್ಕೆಯಾಗಿದ್ದು, ಉಳಿದ ಇಬ್ಬರು ವರ್ಗಾವಣೆಯ ಮೂಲಕ ನೇಮಕಗೊಂಡಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಶಿವಕುಮಾರ್ ಕೆ.ಬಿ. ಅವರು ಜುಲೈ 7ರಂದು ಅಧಿಕೃತ ಜ್ಞಾಪನ ಪತ್ರ ಹೊರಡಿಸಿದ್ದಾರೆ.
ನೇಮಕಗೊಂಡ ವೈದ್ಯರು ಈ ಕೆಳಗಿನಂತಿದ್ದಾರೆ:
- ಡಾ. ಕೆ. ನಾಗೇಶ್ ಕುಮಾರ್ – ದಂತ ತಜ್ಞ
- ಡಾ. ಸುಪ್ರೀತ್ – ಮಕ್ಕಳ ತಜ್ಞ
- ಡಾ. ವಿನಯ್ – ಅರವಳಿಕೆ ತಜ್ಞ
- ಡಾ. ಕವಿತಾ – ಇ.ಎನ್.ಟಿ ತಜ್ಞ
- ಡಾ. ಗಣೇಶ್ ನಾಯಕ್ – ಮೂಳೆ ತಜ್ಞ
ಕಣ್ಣಿನ ತಜ್ಞರ ನೇಮಕಾತಿ ಬಾಕಿ ಉಳಿದಿದ್ದು ಅಲ್ಲದೆ, ಅನೇಕ ನರ್ಸ್ಗಳೂ ಸಹ ವರ್ಗಾವಣೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಆರೋಗ್ಯ ವ್ಯವಸ್ಥೆ ಪುನರ್ ಸ್ಥಾಪನೆಯ ಭರವಸೆ:
ಸ್ಥಳೀಯ ನಾಗರಿಕರು ಹೊಸ ವೈದ್ಯರ ನೇಮಕದಿಂದ ಆಸ್ಪತ್ರೆಯಲ್ಲಿ ಮತ್ತೆ ಉತ್ತಮ ಆರೋಗ್ಯ ಸೇವೆಗಳ ಲಭ್ಯತೆ ಸುಧಾರಣೆಯಾಗಲಿದೆ ಎಂಬ ನಿರೀಕ್ಷೆ ಹೊಂದಿದ್ದಾರೆ.
MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650