ತೀರ್ಥಹಳ್ಳಿ:ತೀರ್ಥಹಳ್ಳಿ ಜೆಸಿ ಆಸ್ಪತ್ರೆಯಲ್ಲಿನ ವೈದ್ಯರ ವರ್ಗಾವಣೆ ಭಾರೀ ಚರ್ಚೆಗೆ ಕಾರಣವಾಗಿದ್ದರ ನಡುವೆ ರಾಜ್ಯ ಸರ್ಕಾರ 5 ಹೊಸ ವೈದ್ಯರನ್ನು ನೇಮಕಗೊಳಿಸಿರುವ ಮಹತ್ವದ ಆದೇಶ ನೀಡಿದೆ. ಈ ಮೂಲಕ ಆರೋಗ್ಯ ಸೇವೆಗಳನ್ನು ಪುನಃ ಸಮರ್ಪಕವಾಗಿ ಸ್ಥಾಪಿಸಲು ಕ್ರಮ ಕೈಗೊಂಡಿದೆ.
ಈ ನೇಮಕಾತಿಯಲ್ಲಿ ಮೂವರು ವೈದ್ಯರು ಕೌನ್ಸಿಲಿಂಗ್ ಪ್ರಕ್ರಿಯೆ ಮೂಲಕ ಆಯ್ಕೆಯಾಗಿದ್ದು, ಉಳಿದ ಇಬ್ಬರು ವರ್ಗಾವಣೆಯ ಮೂಲಕ ನೇಮಕಗೊಂಡಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಶಿವಕುಮಾರ್ ಕೆ.ಬಿ. ಅವರು ಜುಲೈ 7ರಂದು ಅಧಿಕೃತ ಜ್ಞಾಪನ ಪತ್ರ ಹೊರಡಿಸಿದ್ದಾರೆ.
ನೇಮಕಗೊಂಡ ವೈದ್ಯರು ಈ ಕೆಳಗಿನಂತಿದ್ದಾರೆ:
- ಡಾ. ಕೆ. ನಾಗೇಶ್ ಕುಮಾರ್ – ದಂತ ತಜ್ಞ
- ಡಾ. ಸುಪ್ರೀತ್ – ಮಕ್ಕಳ ತಜ್ಞ
- ಡಾ. ವಿನಯ್ – ಅರವಳಿಕೆ ತಜ್ಞ
- ಡಾ. ಕವಿತಾ – ಇ.ಎನ್.ಟಿ ತಜ್ಞ
- ಡಾ. ಗಣೇಶ್ ನಾಯಕ್ – ಮೂಳೆ ತಜ್ಞ
ಕಣ್ಣಿನ ತಜ್ಞರ ನೇಮಕಾತಿ ಬಾಕಿ ಉಳಿದಿದ್ದು ಅಲ್ಲದೆ, ಅನೇಕ ನರ್ಸ್ಗಳೂ ಸಹ ವರ್ಗಾವಣೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಆರೋಗ್ಯ ವ್ಯವಸ್ಥೆ ಪುನರ್ ಸ್ಥಾಪನೆಯ ಭರವಸೆ:
ಸ್ಥಳೀಯ ನಾಗರಿಕರು ಹೊಸ ವೈದ್ಯರ ನೇಮಕದಿಂದ ಆಸ್ಪತ್ರೆಯಲ್ಲಿ ಮತ್ತೆ ಉತ್ತಮ ಆರೋಗ್ಯ ಸೇವೆಗಳ ಲಭ್ಯತೆ ಸುಧಾರಣೆಯಾಗಲಿದೆ ಎಂಬ ನಿರೀಕ್ಷೆ ಹೊಂದಿದ್ದಾರೆ.
ಅವರು MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 2019ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಅವರು ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ. ಅವರು ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.