ರಿಪ್ಪನ್ಪೇಟೆ ; ಅಜ್ಞಾನದ ಕತ್ತಲೆಯನ್ನು ಹೋಗಲಾಡಿಸುವ ಶಕ್ತಿಯೇ ಗುರು. ಗುರುಶಕ್ತಿಯ ಯಾವ ರೂಪದಲ್ಲಿ ಬಂದು ಹೇಗೆ ನಮ್ಮನ್ನು ಉದ್ದರಿಸುತ್ತದೆ ಎನ್ನುವುದು ಅನೂಹ್ಯ. ವ್ಯಕ್ತಿರೂಪದಲ್ಲಿ ಪ್ರೇರಕನಾಗಿಯೋ ಸೂಚಕನಾಗಿಯೋ ದರ್ಶಕನಾಗಿಯೋ ವಾಚಕನಾಗಿಯೋ ಶಿಕ್ಷಕನಾಗಿಯೋ ಬೋಧಕನಾಗಿಯೋ ಬಂದು ಆಶೀರ್ವದಿಸುವ ಇವರೆಲ್ಲರಲ್ಲದೆ ನಮ್ಮೂಳಗಿನೊಳಗೆ ಅಂತರ್ಯಾಮಿ ಗುರುವಿರುತ್ತಾನೆ ಎಂದು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಅಭಿನವ ಚನ್ನಬಸವ ಮಹಾಸ್ವಾಮೀಜಿ ಹೇಳಿದರು.
ಮೂಲೆಗದ್ದೆ ಸದಾನಂದ ಶಿವಯೋಗಾಸ್ರಮದಲ್ಲಿ ನಡೆದ ಗುರುಪೂರ್ಣಿಮೆ ದಿನದ ಅಂಗವಾಗಿ ಲಿಂ/ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ಕರ್ತೃಗದ್ದುಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಗುರ ಸ್ಮರಣೆ ನೆರವೇರಿಸಿ ಆಶೀರ್ವಚನ ನೀಡಿದರು.
ಈ ಸಂದರ್ಭದಲ್ಲಿ ಮಠದ ಸದ್ಬಕ್ತರು ಪಾಲ್ಗೊಂಡಿದ್ದರು.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.