ಸಾಗರ – ಮಲೆನಾಡಿನ ಹೆಬ್ಬಾಗಿಲಾದ ಸಾಗರ ತಾಲ್ಲೂಕಿನ ಸಿಗಂದೂರು ಸೇತುವೆ ಲೋಕಾರ್ಪಣೆಗೆ ಕ್ಷಣಗಣನೆ ಆರಂಭವಾಗಿದೆ. ಜುಲೈ 14 ಸೋಮವಾರ ನಡೆಯಲಿರುವ ಈ ಐತಿಹಾಸಿಕ ಸಮಾರಂಭಕ್ಕೆ ಸಾಗರ ನಗರದ ನೆಹರೂ ಮೈದಾನದಲ್ಲಿ ಬೃಹತ್ ವೇದಿಕೆ ಸಿದ್ಧವಾಗುತ್ತಿದೆ.
ಬೃಹತ್ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ಪ್ರಹ್ಲಾದ್ ಜೋಷಿ, ರಾಜ್ಯ ಸರ್ಕಾರದ ಸಚಿವರು, ಶಾಸಕರು, ಸಂಸದರು ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಲಿದ್ದು, ಹತ್ತು ಸಾವಿರಕ್ಕಿಂತ ಹೆಚ್ಚು ಜನ ಸೇರಲಿದ್ದಾರೆ ಎನ್ನಲಾಗಿದೆ.
ಹೊಳೇಬಾಗಿಲು ಬಳಿ ನಿರ್ಮಾಣವಾಗಿರುವ ಈ ಸೇತುವೆ ಮಲೆನಾಡಿನ ಅಭಿವೃದ್ಧಿಗೆ ನಾಂದಿ ಹಾಡಲಿದ್ದು, ಇದರಿಂದ ಸಿಗಂದೂರು ಹಾಗೂ ಸುತ್ತಮುತ್ತಲ ಗ್ರಾಮಗಳಿಗೆ ಸುಗಮ ಸಂಪರ್ಕ ದೊರೆಯಲಿದೆ. ಆರು ದಶಕಗಳ ಕನಸು ಈಡೇರಲಿರುವ ಈ ಸಂದರ್ಭ, ಸ್ಥಳೀಯರು ಭಾವನಾತ್ಮಕವಾಗಿ ಪಾಲ್ಗೊಳ್ಳಲು ತುದಿಗಾಲಿನಲ್ಲಿ ಕಾಯುತ್ತಿದ್ದಾರೆ.
ಕಾರ್ಯಕ್ರಮ ವಿವರಗಳು:
- ಬೆಳಿಗ್ಗೆ 10:30 – ನಿತಿನ್ ಗಡ್ಕರಿ ಅವರಿಂದ ಸೇತುವೆ ಲೋಕಾರ್ಪಣೆ
- 11:00 – ಸಿಗಂದೂರು ದೇವಿಗೆ ವಿಶೇಷ ಪೂಜೆ
- ಮಧ್ಯಾಹ್ನ 12:00 – ನೆಹರೂ ಮೈದಾನದಲ್ಲಿ ಸಾರ್ವಜನಿಕ ಸಮಾರಂಭ
ಈ ಮಹತ್ವದ ಕಾರ್ಯಕ್ರಮಕ್ಕೆ ಎಲ್ಲರನ್ನು ಆಹ್ವಾನಿಸಲಾಗಿದೆ.
MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.