ಸಾಗರ :ಮಲೆನಾಡಿನ ಜನತೆ ದೀರ್ಘಕಾಲದಿಂದ ಕಾಯುತ್ತಿದ್ದ ಅಂಬಾರಗೋಡ್ಲು–ಕಳಸವಳ್ಳಿ ಸೇತುವೆ ಇಂದು (ಸೋಮವಾರ) ಅದ್ದೂರಿಯಾಗಿ ಲೋಕಾರ್ಪಣೆಗೊಂಡಿದೆ. ಕಳೆದ 60 ವರ್ಷಗಳಿಂದ ಮಲೆನಾಡಿಗರ ಕನಸಾಗಿ ಉಳಿದಿದ್ದ ಈ ಸೇತುವೆ ಇನ್ನು ಮುಂದೆ ಈ ಪ್ರದೇಶದ ಸಂಪರ್ಕ ವ್ಯವಸ್ಥೆಗೆ ನವಚೈತನ್ಯ ನೀಡಲಿದೆ.



ಈ ಐತಿಹಾಸಿಕ ಕ್ಷಣದಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ಸಮ್ಮುಖದಲ್ಲಿ ಸೇತುವೆಯ ಲೋಕಾರ್ಪಣೆ ನೆರವೇರಿತು. ಅವರೊಂದಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಶಾಸಕರಾದ ಡಿ.ಎಸ್. ಅರುಣ್ ಮತ್ತು ಎಸ್ಎನ್ ಚನ್ನಬಸಪ್ಪ,ಕಾಂಗ್ರೆಸ್ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ ,ಮಾಜಿ ಶಾಸಕ ಹಾಲಪ್ಪ ಹರತಾಳು ಮತ್ತು ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈ ನಡುವೆಯೇ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಕಾರ್ಯಕ್ರಮಕ್ಕೆ ಗೈರುಹಾಜರಾಗಿದ್ದು,ಈ ಗೈರಹಾಜರಿಯ ಕುರಿತು ಕೆಲವೊಂದು ಚರ್ಚೆಗಳನ್ನು ಹುಟ್ಟುಹಾಕಿದೆ.

sigandru bridge inaugrated
MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.