ಶಿವಮೊಗ್ಗ

ಶಿವಮೊಗ್ಗ: ಲಂಚ ಸ್ವೀಕರಿಸುತ್ತಿದ್ದಾಗ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ !

ಶಿವಮೊಗ್ಗ : ತಾಲ್ಲೂಕಿನ ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಕುಮಾರ್ ನಾಯಕ್ ಅವರು ಲಂಚ ಪಡೆಯುವ ವೇಳೆ ಲೋಕಾಯುಕ್ತದ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಮುದ್ದಿನಕೊಪ್ಪದ ಶ್ರೀರಾಂಪುರ ಗ್ರಾಮದ ನಿವಾಸಿ ವಿನೋದ್ ಅವರು ತಮ್ಮ ತಾಯಿ ಹೆಸರಿನಲ್ಲಿ ಹೊಂದಿರುವ 30×50 ಅಳತೆಯ ಜಾಗದಲ್ಲಿ ಆರ್‌ಸಿಸಿ ಮನೆ ಕಟ್ಟಲು ನಿರ್ಧರಿಸಿದ್ದರು. ಇದರ ಅಂಗವಾಗಿ ಇ-ಸ್ವತ್ತು ನೊಂದಣಿ ಮಾಡಲು ಅವರು ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿ ಸಲ್ಲಿಸಿದ ನಂತರವೂ ಹಲವು ದಿನಗಳವರೆಗೆ ಯಾವುದೇ ಸ್ಪಷ್ಟ ಪ್ರತಿಕ್ರಿಯೆ ದೊರೆಯಲಿಲ್ಲ.

ಪದೇಪದೇ ಕಚೇರಿಗೆ ಹೋಗಿ ಬಂದರೂ, ಕೆಲಸ ಮುಂದುವರಿಯದ ಹಿನ್ನೆಲೆ, ವಿನೋದ್ ಅವರು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಕುಮಾರ್ ನಾಯಕ್ ಅವರನ್ನು ಭೇಟಿಯಾಗಿ ವಿಚಾರಿಸಿದಾಗ, ಅವರು ಕೆಲಸದಲ್ಲಿ ₹3000 ಲಂಚದ ಬೇಡಿಕೆ ಇಟ್ಟಿದ್ದರು. ಇದರಿಂದ ಅಸಮಾಧಾನಗೊಂಡ ವಿನೋದ್ ಅವರು ತಕ್ಷಣವೇ ಲೋಕಾಯುಕ್ತ ಇಲಾಖೆಯನ್ನು ಸಂಪರ್ಕಿಸಿ ದೂರು ಸಲ್ಲಿಸಿದರು.

ಲೋಕಾಯುಕ್ತ ಎಸ್‌ಪಿ ಮಂಜುನಾಥ್ ಚೌಧರಿ ನೇತೃತ್ವದಲ್ಲಿ ಕಾರ್ಯಾಚರಣೆ ರೂಪುಗೊಂಡು, ಇಂದು (ಜುಲೈ 17) ಮಧ್ಯಾಹ್ನ 2 ಗಂಟೆ ಸಮಯದಲ್ಲಿ ಕಾರ್ಯದರ್ಶಿ ಕುಮಾರ್ ನಾಯಕ್ ಅವರು ಲಂಚ ಸ್ವೀಕರಿಸುತ್ತಿದ್ದಾಗ ತಪಾಸಣೆ ನಡೆಸಿದ ಅಧಿಕಾರಿಗಳು ಅವರನ್ನು ಬಯಲಿಗೆಳೆದರು. ಬಳಿಕ ಅವರಿಗೆ ಕೇಳುಗಸೂಚನೆಯೊಂದಿಗೆ ವಿಚಾರಣೆ ಕೈಗೊಂಡಿದ್ದಾರೆ.

ಸೇತುವೆ ಉದ್ಘಾಟನೆ ನಂತರ ಸಿಗಂದೂರಿಗೆ KSRTC ಬಸ್ ಸೇವೆ ವಿಸ್ತರಣೆ : ಭಕ್ತರಿಗೆ ಅನುಕೂಲ

Leave a Comment