ಕೌಟುಂಬಿಕ ಕಲಹ: 20 ದಿನದ ಹಿಂದೆ ಆತ್ಮಹ*ತ್ಯೆಗೆ ಯತ್ನಿಸಿದ್ದ ಪತ್ನಿ ಸಾ*ವು, ಪತಿ ಬಂಧನ

Written by Koushik G K

Published on:

ಆನಂದಪುರ:ದಂಪತಿಗಳ ನಡುವೆ ನಡೆದ ಗಂಭೀರ ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ ಕಂಡಿದ್ದು, ಪತ್ನಿಯ ಸಾ*ವು ನಡೆದಿದೆ. ಆತ್ಮಹ*ತ್ಯೆಗೆ ಯತ್ನಿಸಿ 20 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಗುರುವಾರ ಕೊನೆಯುಸಿರೆಳೆದಿದ್ದು, ಘಟನೆಯ ಬಳಿಕ ಪತಿಯನ್ನ ಪೊಲೀಸರು ಬಂಧಿಸಿದ್ದಾರೆ

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಆಚಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಲಕ್ಕವಳ್ಳಿ ಗ್ರಾಮದ ನಿವಾಸಿ ಗಿರಿಜಾ (38) ಎಂಬವರು ಸಾ*ವಾಗಿದ್ದು, ಪತಿ ಶ್ರೀಕಾಂತ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಗಿರಿಜಾ ಕಳೆದ 20 ದಿನಗಳ ಹಿಂದೆ ಮನೆಯಲ್ಲೇ ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹ*ತ್ಯೆಗೆ ಯತ್ನಿಸಿದ್ದರು. ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಜು.17 ರಂದು ಸಾ*ವಿಗೀಡಾಗಿದ್ದಾರೆ .

ಅಂತ್ಯ ಸಂಸ್ಕಾರದ ನಂತರ, ಪತಿ ಶ್ರೀಕಾಂತ್ ಅವರನ್ನು ಆನಂದಪುರ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶೆಟ್ಟಿಹಳ್ಳಿ ವನ್ಯಜೀವಿಧಾಮದ ಗಡಿ ಪರಿಷ್ಕರಣೆಗೆ ಸಚಿವ ಸಂಪುಟದ ಅಸ್ತು: ಅರಣ್ಯ ಸಚಿವ ಈಶ್ವರ ಖಂಡ್ರೆ

Leave a Comment