ರಿಪ್ಪನ್ಪೇಟೆ ; ಸಾರ್ವಜನಿಕರೊಂದಿಗೆ ನಿಕಟ ಸಂಬಂಧ ಹೊಂದುವ ಉದ್ದೇಶದಿಂದ ರಾಜ್ಯ ಪೊಲೀಸ್ ಇಲಾಖೆ ಜಾರಿಗೆ ತಂದಿರುವ ಮನೆ-ಮನೆಗೆ ಪೊಲೀಸ್ ಎಂಬ ವಿನೂತನ ಕಾರ್ಯಕ್ರಮದ ಭಾಗವಾಗಿ ರಿಪ್ಪನ್ಪೇಟೆ ಪೊಲೀಸ್ ಠಾಣೆ ವತಿಯಿಂದ ಕೋಡೂರು ಮತ್ತು ಬಾಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿಂದು ಚಾಲನೆ ನೀಡಲಾಯಿತು.
ಬಾಳೂರು ಹಕ್ಕಿಪಿಕ್ಕಿ ಬಡಾವಣೆಯಲ್ಲಿ ಹಕ್ಕಿಪಿಕ್ಕಿ ಜನಾಂಗವದರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಸಿದರು.

ರಿಪ್ಪನ್ಪೇಟೆ ಪೊಲೀಸ್ ಠಾಣೆಯ ಪಿಎಸ್ಐ ರಾಜುರೆಡ್ಡಿ ಬೆನ್ನೂರು ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿವರ್ಗ ಹಾಲುಗುಡ್ಡೆಯ ಹಕ್ಕಿಪಿಕ್ಕಿ ಜನಾಂಗದವರಿಗೆ ಮತ್ತು ಕೋಡೂರಿಗೆ ಗ್ರಾಪಂಗೆ ಭೇಟಿ ನೀಡಿ ಸಾರ್ವಜನಿಕರೊಂದಿಗೆ ಮಾತನಾಡಿ, ಈ ಕಾರ್ಯಕ್ರಮದ ಉದ್ದೇಶ ಹಾಗೂ ಮಹತ್ವವನ್ನು ವಿವರಿಸುವ ಮೂಲಕ ಸಮಸ್ಯೆಗಳನ್ನು ಆಲಿಸಿ ತಕ್ಷಣ ಸ್ಪಂದಿಸಿ ಪರಿಹಾರ ಕಲ್ಪಿಸುವ ಬಗ್ಗೆ ಮಾಹಿತಿ ನೀಡಿದರು.
ಜನರು ನೇರವಾಗಿ ನಮ್ಮ ಪೊಲೀಸ್ ಸಿಬ್ಬಂದಿಗಳೊಂದಿಗೆ ಯಾವುದೇ ಹಿಂಜರಿಕೆ ಇಲ್ಲದಂತೆ ತಮ್ಮ ಗ್ರಾಮದ ಹಾಗೂ ತಮ್ಮಲ್ಲಿನ ಸಮಸ್ಯೆಯನ್ನು ಹೇಳಿಕೊಂಡು ಪರಿಹರಿಸಿಕೊಳ್ಳುವುದು ಮನೆ-ಮನೆಗೆ ಪೊಲೀಸ್ ಕಾರ್ಯಕ್ರಮದ ಉದ್ದೇಶವೆಂದು ಪಿಎಸ್ಐ ರಾಜುರೆಡ್ಡಿ ಬೆನ್ನೂರು ತಿಳಿಸಿದರು.
ಈಗಾಗಲೇ ಈ ಮಹತ್ವಾಕಾಂಕ್ಷಿ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಇದರ ಸದುಪಯೋಗ ಎಲ್ಲರೂ ಪಡೆದುಕೊಳ್ಳಲು ಕರೆ ನೀಡಿದರು.

ಪೊಲೀಸ್ ಸಿಬ್ಬಂದಿಗಳಾದ ಉಮೇಶ್, ಗಿರೀಶ್, ಸಂತೋಷ, ವಾಹನ ಚಾಲಕ ಅಭಿಲಾಶ್ ಇನ್ನಿತರರು ಪಾಲ್ಗೊಂಡಿದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.