ರಿಪ್ಪನ್ಪೇಟೆ ; ಕಾರು ಚಲಾಯಿಸುತ್ತಿದ್ದಾಗಲೇ ತೀವ್ರ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃ*ತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಪಟ್ಟಣದ ಸರ್ಕಲ್ ನಲ್ಲಿ ಶುಕ್ರವಾರ ನಡೆದಿದೆ.
ರಿಪ್ಪನ್ಪೇಟೆ ಪಟ್ಟಣದ ಹೊಸನಗರ ರಸ್ತೆಯ ನಿವಾಸಿ ಕಬೀರ್ (54) ಮೃ*ತ ದುರ್ದೈವಿ. ರಿಪ್ಪನ್ಪೇಟೆಯಿಂದ ಶಿವಮೊಗ್ಗಕ್ಕೆ ಕಾರ್ಯನಿಮಿತ್ತ ಕಾರಿನಲ್ಲಿ ತೆರಳುತಿದ್ದಾಗ ಆಯನೂರು ಸರ್ಕಲ್ ನಲ್ಲಿ ಕಾರು ಚಾಲನೆಯಲ್ಲಿದ್ದಾಗಲೇ ಏಕಾಏಕಿ ಎದೆ ನೋವು ಎಂದು ಪಕ್ಕದಲ್ಲಿದ್ದ ವ್ಯಕ್ತಿಯ ಬಳಿ ಹೇಳಿ ಕೂಡಲೇ ಮೂರ್ಚೆ ಹೋಗಿದ್ದಾರೆ. ತಕ್ಷಣ ಸಹಸವಾರ ಕಾರಿನ ಬ್ರೇಕ್ ಹಾಕಿ ನಿಲ್ಲಿಸಿ ಏನಾಗಿದೆ ಎಂದು ವಿಚಾರಿಸಿದ್ದಾರೆ. ನಂತರ ಸ್ಥಳೀಯರ ನೆರವಿನಿಂದ ಆಯನೂರು ಸಮುದಾಯ ಆಸ್ಪತ್ರೆಗೆ ಕರೆತಂದು ಕೂಡಲೇ ಆಂಬುಲೆನ್ಸ್ ಮೂಲಕ ಶಿವಮೊಗ್ಗದ ನಂಜಪ್ಪ ಲೈಫ಼್ ಕೇರ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಅಷ್ಟರಲ್ಲಾಗಲೇ ಕಬೀರ್ ಸಾ*ವನ್ನಪ್ಪಿದ್ದರು.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.