ರಿಪ್ಪನ್‌ಪೇಟೆಯಲ್ಲಿ ಹರ್‌ಘರ್ ತಿರಂಗಾ ಬೈಕ್ ರ‍್ಯಾಲಿ

Written by Mahesha Hindlemane

Published on:

ರಿಪ್ಪನ್‌ಪೇಟೆ ; ಇಲ್ಲಿನ ಹಿಂದೂ ಜಾಗರಣ ವೇದಿಕೆಯವರು ರಿಪ್ಪನ್‌ಪೇಟೆಯಲ್ಲಿ ಹರ್‌ಘರ್ ತಿರಂಗಾ ಬೈಕ್ ರ‍್ಯಾಲಿ ನಡೆಸಿ ಜನರಲ್ಲಿ ಜಾಗೃತಿಯ ಅರಿವು ಮೂಡಿಸಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಗ್ರಾಮೀಣ ಪ್ರದೇಶದ ಜನರಿಗೆ ದೇಶದ ಸ್ವಾತಂತ್ರ್ಯದ ಮಹತ್ವ ತಿಳಿಸುವ ಮತ್ತು ತ್ರಿವರ್ಣ ಧ್ವಜದ ಕುರಿತು ಅರಿವು ಮೂಡಿಸಲು ಜನರಲ್ಲಿ ದೇಶಾಭಿಮಾನ ಬೆಳಸುವ ಉದ್ದೇಶದಿಂದ ಬೈಕ್ ರ‍್ಯಾಲಿ ನಡೆಸಿದರು.

ಇಲ್ಲಿನ ಸಿದ್ದಿವಿನಾಯಕ ದೇವಸ್ಥಾನದಿಂದ ಹೊರಟು ಶಿವಮೊಗ್ಗ – ತೀರ್ಥಹಳ್ಳಿ – ಹೊಸನಗರ – ಸಾಗರ ಪ್ರಮುಖ ರಸ್ತೆಯಲ್ಲಿ ನೂರಾರು ಬೈಕ್‌ಗಳ ಮೂಲಕ ರ‍್ಯಾಲಿ ತೆರಳಿ ನಂತರ ವಿನಾಯಕ ದೇವಸ್ಥಾನದ ಹಿಂಭಾಗದಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಸಂವಾದ ಮತ್ತು ದೇಶ ಭಕ್ತಿಯ ವಿಚಾರದ ಅರಿವು ಮೂಡಿಸಿ ಪ್ರತಿ ಮನೆಯ ಮೇಲೂ ದೇಶಭಕ್ತಿಗಾಗಿ ತಿರಂಗಾ ಬಾವುಟ ಹಾರಿಸುವಂತೆ ಕರೆ ನೀಡಿದರು.

ಹಿಂದು ಜಾಗರಣಾ ವೇದಿಕೆಯ ಪ್ರಮುಖ  ಕುಷನ ದೇವರಾಜ್ ಕೆರೆಹಳ್ಳಿ, ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಮಿತಿಯ ಅಧ್ಯಕ್ಷ ಪಿ.ಸುಧೀರ್, ಮುರುಳಿ ಕೆರೆಹಳ್ಳಿ, ಎಂ.ಬಿ. ಮಂಜುನಾಥ, ಎಂ.ಸುರೇಶ್‌ಸಿಂಗ್, ಸುಧೀಂದ್ರ ಪೂಜಾರಿ, ಜಿ.ಡಿ.ಮಲ್ಲಿಕಾರ್ಜುನ, ಸುಂದರೇಶ್,ಇನ್ನಿತರ ಮುಖಂಡರು ಪಾಲ್ಗೊಂಡಿದ್ದರು.

Leave a Comment