ಮಳವಳ್ಳಿ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ದಿಗೆ ₹ 10 ಲಕ್ಷ ಅನುದಾನ ಬಿಡುಗಡೆ

Written by Mahesha Hindlemane

Published on:

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಮಳವಳ್ಳಿ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಮುಜರಾಯಿ ಇಲಾಖೆಯಿಂದ 10 ಲಕ್ಷ ರೂ. ಅನುದಾನ ಬಿಡುಗಡೆಯಾಗಿದ್ದು ಈ ಅನುದಾನದ ಚೆಕ್‌ ಅನ್ನು ಶಾಸಕ ಗೋಪಾಲಕೃಷ್ಣ ಬೇಳೂರು ದೇವಸ್ಥಾನ ಸೇವಾ ಸಮಿತಿಯವರಿಗೆ ವಿತರಿಸಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಬಹುದಿನಗಳ ಬೇಡಕೆಯಾಗಿದ್ದ ಇಲ್ಲಿನ ದೇವಸ್ಥಾನದ ಅಭಿವೃದ್ದಿಗೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿಸುವಂತೆ ಮನವಿ ಮಾಡಿಕೊಂಡ ಮೇರೆಗೆ ಶಾಸಕರು ಧಾರ್ಮಿಕ ದತ್ತಿ ಇಲಾಖೆಯಿಂದ 10 ಲಕ್ಷ ರೂ. ಅನುದಾನವನ್ನು ಬಿಡುಗಡೆ ಮಾಡಿಸಿರುವುದಾಗಿ ತಿಳಿಸಿ, ಶನಿವಾರ ಹೊಸನಗರ ತಹಸೀಲ್ದಾರ್ ಕಛೇರಿಯಲ್ಲಿ ದೇವಸ್ಥಾನ ಸಮಿತಿಯವರಿಗೆ ಚೆಕ್ ವಿತರಿಸಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ರಶ್ಮಿ ಹಾಲೇಶ್, ದೇವಸ್ಥಾನ ಸಮಿತಿಯ ಅಧ್ಯಕ್ಷ ನಾಗರಾಜಗೌಡ, ಹೆದ್ದಾರಿಪುರ ಗ್ರಾಮ ಪಂಚಾಯಿತಿ ಸದಸ್ಯ ಚಂದ್ರಶೇಖರ, ಕಾರ್ಯದರ್ಶಿ ರವಿ, ಖಜಾಂಚಿ ಉಮೇಶ್, ವಿಜಯ, ಸುರೇಶ, ಜಾನಕಣ್ಣ, ನಾಗಭೂಷಣ, ಶಿವಕುಮಾರ್, ಆದರ್ಶ ಮಳವಳ್ಳಿ, ಉಮಾಕರ್, ಇನ್ನಿತರರು ಹಾಜರಿದ್ದು ಶಾಸಕರನ್ನು ಅಭಿನಂದಿಸಿ ಸನ್ಮಾನಿಸಿದರು.

Leave a Comment