ತೀರ್ಥಹಳ್ಳಿ ; ಆಗುಂಬೆಯ ಎವಿಎಂ ಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ದರ್ಶನ್ ಬಿನ್ ವಿಜಯ್ ಎಂಬ 14 ವರ್ಷದ ಬಾಲಕ ಶಾಲೆಯ ಹಾಸ್ಟೆಲ್ನಿಂದ ಆ.18 ರಿಂದ ಕಾಣೆಯಾಗಿದ್ದು, ಈವರೆಗೂ ವಾಪಾಸ್ಸು ಬಂದಿರುವುದಿಲ್ಲ.
ಕಾಣೆಯಾದವನ ಚಹರೆ :
ಈತನ ಎತ್ತರ 4.6 ಅಡಿ, ಸಾಧಾರಣ ಮೈಕಟ್ಟು, ದುಂಡುಮುಖ, ಎಣ್ಣೆಕೆಂಪು ಮೈಬಣ್ಣ ಹೊಂದಿದ್ದು, ಎಡ ಪಕ್ಕೆಯಲ್ಲಿ ಕಪ್ಪು ಮಚ್ಚೆಯಿರುತ್ತದೆ. ಈತ ಕನ್ನಡ ಮತ್ತು ತಮಿಳು ಮಾತಾನಾಡುತ್ತಿದ್ದು, ಹೊರಹೋಗುವಾಗ ಗ್ರೇ ಬಣ್ಣದ ಅರ್ಧ ತೋಳಿನ ಅಂಗಿ, ಜರ್ಕಿನ್, ಬ್ಲೂ ಬಣ್ಣದ ಪ್ಯಾಂಟ್, ಬಿಳಿ ಚಪ್ಪಲಿ, ಆಕಾಶ ನೀಲಿ ಬಣ್ಣದ ಬ್ಯಾಗ್ ಹಾಕಿಕೊಂಡಿರುತ್ತಾರೆ.

ಈ ಬಾಲಕನ ಸುಳಿವು ದೊರೆತಲ್ಲಿ ಶಿವಮೊಗ್ಗ ಎಸ್.ಪಿ ಕಚೇರಿ 08182-261400, ತೀರ್ಥಹಳ್ಳಿ ಡಿವೈಎಸ್ಪಿ 08181-220388, ಮಾಳೂರು ಸಿಪಿಐ 9480803333 ಹಾಗೂ ಆಗುಂಬೆ ಪಿಎಸ್ಐ 9480803314 ಇವರುಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.
MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.