HOSANAGARA | ಮುಂಗಾರು ಪೂರ್ವ ಮಳೆ (Monsoon Rain) ಹಾಗೂ ಗಾಳಿಯ ರಭಸಕ್ಕೆ ಮನೆ ಮೇಲೆ ಮರ (Tree) ಬಿದ್ದು ಹಾನಿಯಾದ (Rain Damage) ಘಟನೆ ತಾಲೂಕಿನ ನೀರೇರಿ (Neereri) ಗ್ರಾಮದಲ್ಲಿ ಭಾನುವಾರ ಸಂಭವಿಸಿದೆ.
ಇಲ್ಲಿನ ನಿವಾಸಿ ಶಂಕರಪ್ಪ ಎಂಬುವವರ ಮನೆಯ ಸಮೀಪದಲ್ಲಿದ್ದ ಬೃಹದಾಕಾರದ ಕಾಡುಜಾತಿ ಮರ, ಗಾಳಿ ಮಳೆ ಬಂದ ವೇಳೆ ಬುಡಸಮೇತ ಮನೆ ಮೇಲೆ ಉರುಳಿ ಬಿದ್ದಿದೆ. ಬಿದ್ದ ರಭಸಕ್ಕೆ ಮನೆಯ ಒಂದು ಭಾಗದ ಚಾವಣಿಗೆ ಹಾನಿಯಾಗಿದೆ. ಸಮೀಪದಲ್ಲಿಯೇ ವಿದ್ಯುತ್ ತಂತಿ ಹಾದು ಹೋಗಿದ್ದು, ಕೂದಲೆಳೆಯ ಅಂತರದಲ್ಲಿ ದೊಡ್ಡ ಅನಾಹುತ ತಪ್ಪಿದೆ. ಅಲ್ಲದೇ, ಕುಟುಂಬದ ಸದಸ್ಯರೆಲ್ಲವೂ ಜಮೀನು ಕೆಲಸಕ್ಕೆ ತೆರಳಿದ ವೇಳೆ ಘಟನೆ ನಡೆದ ಕಾರಣಕ್ಕೆ ಪ್ರಾಣಾಪಾಯವಾಗಿಲ್ಲ.

ಶಾಸಕ ಬೇಳೂರು ಭೇಟಿ:
ವಿಷಯ ತಿಳಿದು ಘಟನಾ ಸ್ಥಳಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ನೀಡಿ ಕುಟುಂಬದ ಸದಸ್ಯರ ಜೊತೆ ಸಮಾಧಾನದ ಮಾತುಗಳನ್ನಾಡಿದರು. ಸರ್ಕಾರದಿಂದ ದೊರೆಯುವ ಪರಿಹಾರ ಆದಷ್ಟು ಬೇಗನೆ ದೊರೆಯಲು ತೆಗೆದುಕೊಳ್ಳಬೇಕಾದ ಕ್ರಮಗಳನ್ನು ವಹಿಸುವಂತೆ ಕಂದಾಯ ಅಧಿಕಾರಿಗಳಿಗೆ ಸೂಚಿಸಿದರು. ವಸತಿ ಯೋಜನೆಯಡಿ ಲಭ್ಯವಾದಲ್ಲಿ ಮನೆ ಅನುದಾನ ಒದಗಿಸುವಂತೆ ಗ್ರಾಮ ಪಂಚಾಯಿತಿ ಸದಸ್ಯರಿಗೆ ತಿಳಿಸಿದ ಅವರು ನೊಂದ ಕುಟುಂಬಕ್ಕೆ ವೈಯಕ್ತಿಕ ಧನ ಸಹಾಯ ಮಾಡಿದರು.
ಈ ವೇಳೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಜಿ.ಚಂದ್ರಮೌಳಿ, ಗ್ರಾಪಂ ಅಧ್ಯಕ್ಷೆ ದೀಪಿಕಾ ಕೃಷ್ಣ, ಸದಸ್ಯ ಎಚ್.ಬಿ.ಚಿದಂಬರ, ಚಂದ್ರಪ್ಪ, ಪ್ರಕಾಶ, ಪ್ರಮುಖರಾದ ಸಿದ್ದವೀರಪ್ಪಗೌಡ, ಎಸ್.ಕೆ.ರಾಜು, ಸಣ್ಣಕ್ಕಿ ಮಂಜು, ಮತ್ತಿತರರು ಇದ್ದರು.
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
RipponpeteJune 5, 2025ಮುರುಘಾಮಠದ ಉತ್ತರಾಧಿಕಾರಿ ಉನ್ನತ ಅಧ್ಯಯನಕ್ಕಾಗಿ ಶಿವಯೋಗ ಮಂದಿರದ ಗುರುಕುಲಕ್ಕೆ
HosanagaraJune 5, 2025ಹೊಸನಗರ ಪ.ಪಂ. ವ್ಯಾಪ್ತಿಯಲ್ಲಿ ಕುಡಿಯುವ ನೀರಿಗಾಗಿ ಪರದಾಟ…!
RipponpeteJune 4, 2025ಅಮ್ಮನಘಟ್ಟ ನೂತನ ಶಿಲಾಮಯ ದೇವಾಲಯ ಲೋಕಾರ್ಪಣೆ ; ದೇವಸ್ಥಾನದಲ್ಲಿ ಜಾತಿ ಭೇದ ಭಾವನೆ ಬೇಡ
ShivamoggaJune 3, 2025ಸಂಪತ್ತಿನೊಂದಿಗೆ ಒಂದಿಷ್ಟಾದರೂ ಧರ್ಮ ಪ್ರಜ್ಞೆ ಅವಶ್ಯಕ ; ರಂಭಾಪುರಿ ಜಗದ್ಗುರುಗಳು