ಶಿವಮೊಗ್ಗ ; ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ಹೊಸನಗರ ಮತ್ತು ಸಾಗರ ತಾಲೂಕಿನ ಶಾಲಾ, ಕಾಲೇಜುಗಳಿಗೆ ನಾಳೆ (ಆ.28) ರಜೆ ಘೋಷಣೆ ಮಾಡಿ ತಹಸೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ.
ಈ ತಾಲೂಕುಗಳ ವ್ಯಾಪ್ತಿಯಲ್ಲಿ ಅತಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ನಾಳೆ ಕೂಡ ಹೆಚ್ಚಿನ ಮಳೆಯಾಗುವ ಸಂಭವನೀಯತೆ ಹೆಚ್ಚಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಅಂಗನವಾಡಿ ಕೇಂದ್ರಗಳಿಗೆ, ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಮಾತ್ರ ಅನ್ವಯಿಸಿ ರಜೆಯನ್ನು ಘೋಷಿಸಲಾಗಿದೆ. ಮುಂದಿನ ರಜಾ ದಿವಸಗಳಲ್ಲಿ ತರಗತಿಗಳನ್ನು ನಡೆಸಿ ಪಾಠ ಪ್ರವಚನಗಳನ್ನು ಸರಿದೂಗಿಸಲು ಆದೇಶದಲ್ಲಿ ತಿಳಿಸಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.