ಕಾಡಾನೆ ದಾಳಿಗೆ ಇಬ್ಬರು ರೈತರು ದುರ್ಮರಣ

Written by Mahesha Hindlemane

Published on:

ಶೃಂಗೇರಿ : ಚಿಕ್ಕಮಗಳೂರು ಜಿಲ್ಲೆಯ ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ಶುಕ್ರವಾರ ಮುಂಜಾನೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ಇಬ್ಬರು ರೈತರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ತಾಲೂಕಿನ ಕೆರೆಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಡುಬಾ ಎಲ್ಸಾರ ಸಮೀಪ ಈ ಘಟನೆ ನಡೆದಿದೆ.

ಮೃತರನ್ನು ಹರೀಶ್ ಮತ್ತು ಉಮೇಶ್ ಎಂದು ಗುರುತಿಸಲಾಗಿದೆ. ಇಬ್ಬರು ಹಸುವಿನ ಕೊಟ್ಟಿಗೆಗೆ ಸೊಪ್ಪು ತರುವುದಕ್ಕಾಗಿ ಸಮೀಪದ ಅರಣ್ಯ ಪ್ರದೇಶಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಏಕಾಏಕಿ ಎದುರಾದ ಕಾಡಾನೆ, ಇಬ್ಬರ ಮೇಲೂ ದಾಳಿ ನಡೆಸಿ ಅವರನ್ನು ಕೊಂದುಹಾಕಿದೆ ಎಂದು ತಿಳಿದುಬಂದಿದೆ.

ಈ ಘಟನೆಯಿಂದಾಗಿ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

Leave a Comment