ಮಲೆನಾಡು ಪ್ರೌಢಶಾಲೆ ವಿದ್ಯಾರ್ಥಿನಿ ಪ್ರಿಯ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಕ್ಕೆ ಆಯ್ಕೆ

Written by Mahesha Hindlemane

Published on:

ಹೊಸನಗರ ; ಪಟ್ಟಣದ ಮಲೆನಾಡು ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಕು. ಪ್ರಿಯ ಈ ಬಾರಿಯ ಕಬಡ್ಡಿ ಪಂದ್ಯಾವಳಿಯಲ್ಲಿ ತಾಲೂಕು, ಜಿಲ್ಲಾ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಪಾಲ್ಗೊಂಡು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದು ಮಹಾರಾಷ್ಟ್ರ ರಾಜ್ಯದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ತನ್ನ ಪ್ರತಿಭೆ ಹೊರಸೂಸಲಿದ್ದು ಈ ಗ್ರಾಮೀಣ ಪ್ರತಿಭೆಗೆ ಹೊಸನಗರ ಪಟ್ಟಣದಲ್ಲಿ ಶಾಲಾ ಆಡಳಿತ ಮಂಡಳಿ ಶಾಲಾ ಅಭಿವೃದ್ಧಿ ಸಮಿತಿ ವರ್ತಕರ ಸಂಘ ಹಾಗೂ ಸಾರ್ವಜನಿಕರು ಪಟ್ಟಣದ ಮಾವಿನಕೊಪ್ಪ ವೃತ್ತದಿಂದ ಬಸ್ ನಿಲ್ದಾಣದವರೆಗೆ ತೆರೆದ ವಾಹನದಲ್ಲಿ ಘೋಷಣೆಗಳನ್ನು ಕೂಗುತ್ತಾ ವರ್ಣ ರಂಜಿತವಾಗಿ ಮೆರವಣಿಗೆ ಮೂಲಕ ಬರಮಾಡಿಕೊಂಡು ಗ್ರಾಮೀಣ ಪ್ರತಿಭೆಗೆ ಹಾರೈಸಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಈ ಸಂದರ್ಭದಲ್ಲಿ ವರ್ತಕರ ಸಂಘದ ಅಧ್ಯಕ್ಷ ಮಲೆಬೈಲ್ ಪೂರ್ಣೇಶ್, ಕಾರ್ಯದರ್ಶಿ ಸಂತೋಷ್ ಶೇಟ್, ಸುಧೀಂದ್ರ ಪಂಡಿತ್, ಬಿ.ಎಸ್ ಸುರೇಶ್, ನಿಖಿಲ್, ಪ್ರಭಾಕರ್, ಹರೀಶ್ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಮೊದಲಾದವರು ಉಪಸ್ಥಿತರಿದ್ದರು.

ಕು. ಪ್ರಿಯ ಅರಳಿಕೊಪ್ಪದ ಪ್ರಶಾಂತ್ ವನಜಾಕ್ಷಿ ದಂಪತಿಗಳ ಪುತ್ರಿಯಾಗಿದ್ದು ಶಾಸಕ, ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹಾಗೂ ತಾಲೂಕಿನ ಕ್ರೀಡಾ ಪ್ರೇಮಿ ಮಾಸ್ತಿಕಟ್ಟೆ ಸುಬ್ರಮಣ್ಯ ಗ್ರಾಮೀಣ ಪ್ರತಿಭೆ ಕು. ಪ್ರಿಯಾಳ ಸಾಧನೆಗೆ ಅಭಿನಂದಿಸಿದ್ದಾರೆ.

Leave a Comment