ತಂದೆ ಎದುರೆ ಮಗುವನ್ನು ಹೊತ್ತೊಯ್ದ ಚಿರತೆ !

Written by Mahesha Hindlemane

Published on:

ತರೀಕೆರೆ ; ಆಟವಾಡುತ್ತಿದ್ದ ಮಗುವನ್ನು ಚಿರತೆಯೊಂದು ಹೊತ್ತೊಯ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಮುಂಡ್ರೆ ಸಮೀಪದ ನವಿಲೇಕಲ್ ಗುಡ್ಡ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ತೋಟದ ಮನೆಯ ಕೆಲಸಗಾರ ಬಸವರಾಜ ಮತ್ತು ರೇಣುಕಾ ದಂಪತಿಯ ಪುತ್ರಿ ಸಾನ್ವಿ (05) ಮೃತ ಮಗು. ಬೆಂಗಳೂರಿನ ರಾಮಚಂದ್ರಪ್ಪ ಎಂಬುವರಿಗೆ ಸೇರಿದ ಅಡಿಕೆ ತೋಟದಲ್ಲಿ ಧಾರವಾಡದ ಈ ದಂಪತಿ ಕೆಲಸ ಮಾಡಿಕೊಂಡಿದ್ದಾರೆ. ಮನೆಯ ಹೊರಗೆ ಆಟವಾಡುತ್ತಿದ್ದ ಬಾಲಕಿಯನ್ನು ಎಳೆದೊಯ್ದಿದೆ. ಪಕ್ಕದಲ್ಲೇ ಇದ್ದ ತಂದೆ ಚಿರತೆ ಹಿಂದೆ ಓಡಿ ಹೋಗಿದ್ದು, ಚಿರತೆ ಮಗುವಿನೊಂದಿಗೆ ನಾಪತ್ತೆಯಾಗಿತ್ತು. ಸ್ಥಳೀಯರು ಹುಡುಕಾಡಿದಾಗ ಕಾಡಂಚಿನಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದೆ.

ಈ ಕುರಿತು ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment