Hosanagara | ಮಳೆ(ಲೆ)ನಾಡಿನ ತವರೂರು ಲಿಂಗನಮಕ್ಕಿ ಜಲಾಶಯಕ್ಕೆ ನೀರುಣಿಸುವ ಪ್ರಧಾನ ಜಲಾನಯನ ಪ್ರದೇಶವಾದ ಹೊಸನಗರ ತಾಲೂಕಿನಾದ್ಯಂತ ಮೃಗಶಿರ ಮಳೆಯ (Rain) ಅಬ್ಬರ ಜೋರಾಗಿದ್ದು ಮಳೆ ಇಲ್ಲದೆ ಕಂಗಾಲಾಗಿ ತಲೆ ಮೇಲೆ ಕೈ ಹೊತ್ತು ಕುಳಿತ್ತಿದ್ದ ಅನ್ನದಾತ ಇದೀಗ ನಿಟ್ಟುಸಿರು ಬಿಡುವಂತಾಗಿದೆ.
ಎಲ್ಲೆಲ್ಲಿ ಎಷ್ಟು ಮಳೆ ?
ಭಾನುವಾರ ಬೆಳಗ್ಗೆ 8 ಗಂಟೆಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ತಾಲೂಕಿನ ಹುಲಿಕಲ್ಲಿನಲ್ಲಿ ಅತ್ಯಧಿಕ 113 ಮಿ.ಮೀ. ಮಳೆ ಸುರಿದಿದೆ. ಉಳಿದಂತೆ ಮಾಸ್ತಿಕಟ್ಟೆಯಲ್ಲಿ 107, ಮಾಣಿಯಲ್ಲಿ 104, ಹೊಸೂರು-ಸಂಪೆಕಟ್ಟೆ 84, ಬಿದನೂರು ನಗರದ ಮತ್ತು ಮೇಲಿನಬೆಸಿಗೆಯಲ್ಲಿ 68, ಯಡೂರಿನಲ್ಲಿ 64, ಹೊಸನಗರದಲ್ಲಿ 58 ಮಿಲಿ ಮೀಟರ್ ಮಳೆ ದಾಖಲಾಗಿದೆ.
Read More
Karnataka Rain | ಬೆಳೆಗೆ ಜೀವ ಕಳೆ ತಂದ ಮಳೆ, ಸಂತಸದಲ್ಲಿ ರೈತಾಪಿ ವರ್ಗ

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.