ಹೊಸನಗರ ; ಇಲ್ಲಿನ ಉಪ ವಿಭಾಗದಲ್ಲಿ ಡಿ.26 (ಶುಕ್ರವಾರ) ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6-00 ಗಂಟೆವರೆಗೆ 33 ಕೆ.ವಿ. ಸಾಗರ – ಹೊಸನಗರ ಮಾರ್ಗ ನಿರ್ವಹಣೆ ಪ್ರಯುಕ್ತ ಸಾಗರದಿಂದ ಹೊಸನಗರಕ್ಕೆ ಬಂದಿರುವ ಸಾಗರ-ಹೊಸನಗರ ವಿದ್ಯುತ್ ಮಾರ್ಗದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ ?
ಜೇನಿ, ಮಾರುತಿಪುರ, ರಾಮಚಂದ್ರಪುರ, ಮೇಲಿನಬೆಸಿಗೆ, ಎಂ. ಗುಡ್ಡೇಕೊಪ್ಪ, ಕರಿನಗೊಳ್ಳಿ ಗ್ರಾಮ ಪಂಚಾಯ್ತಿ ಮತ್ತು ಹೊಸನಗರ ಟೌನ್ ವ್ಯಾಪ್ತಿಯ ಪ್ರದೇಶಗಳಿಗೆ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದೆ.

ಆದ್ದರಿಂದ ಹೊಸನಗರ ಉಪ ವಿಭಾಗದ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಇಂಜಿನಿಯರ್ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





