ರೈಲಿಗೆ ಸಿಲುಕಿ ಬಸ್ ಚಾಲಕ, 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ! ಸಂಕಷ್ಟಕ್ಕೆ ಸಿಲುಕಿದ ಶಾಲಾ ಆಡಳಿತ ಮಂಡಳಿ

0 6,580

ಅಜ್ಜಂಪುರ : ಚಲಿಸುತ್ತಿದ್ದ ರೈಲಿಗೆ ಸಿಲುಕಿ ಬಸ್ ಚಾಲಕ ಮತ್ತು ಶಾಲಾ ವಿದ್ಯಾರ್ಥಿನಿ (Student) ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಅಜ್ಜಂಪುರ (Ajjampura) ತಾಲೂಕಿನ ಗಿರಿಯಾಪುರ ಗ್ರಾಮದಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಖಾಸಗಿ ಶಾಲಾ (School) ಆಡಳಿತ ಮಂಡಳಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.


ಏನಿದು ಘಟನೆ ?
ಬಂಕನಕಟ್ಟೆ ಸಮೀಪ ಘಟನೆ ನಡೆದಿದ್ದು, ರೈಲಿಗೆ ಅಡ್ಡಲಾಗಿ ನಿಂತು ಡ್ರೈವರ್ ಸಂತೋಷ್ (38) ಹಾಗೂ 8ನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ. ಗಿರಿಯಾಪುರ ಗ್ರಾಮದ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಅದೇ ಶಾಲೆಯ ಬಸ್ ಡ್ರೈವರ್ ಪ್ರೀತಿಸುವಂತೆ ಪೀಡಿಸುತ್ತಿದ್ದ ಎನ್ನಲಾಗಿದೆ.

ಬಸ್ ಡ್ರೈವರ್ ನೀಡುತ್ತಿದ್ದ ಕಿರುಕುಳದ ಬಗ್ಗೆ ವಿದ್ಯಾರ್ಥಿನಿ ಪೋಷಕರು ಶಾಲಾ ಆಡಳಿತ ಮಂಡಳಿ ಗಮನಕ್ಕೆ ತಂದಿದ್ದರು. ವಿದ್ಯಾರ್ಥಿನಿ ರಾತ್ರಿ ಸ್ನೇಹಿತೆಯರ ಜೊತೆ ನ್ಯೂ ಇಯರ್ ಪಾರ್ಟಿಗೆ ಹೋಗುವುದಾಗಿ ಮನೆಯಲ್ಲಿ ತಿಳಿಸಿ ತೆರಳಿದ್ದಳು ಎಂದು ತಿಳಿದು ಬಂದಿದೆ. ಈ ವೇಳೆ ಸಂತೋಷ್ ವಿದ್ಯಾರ್ಥಿನಿಯನ್ನು ಕರೆದೊಯ್ದು ಮಧ್ಯರಾತ್ರಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಶಾಲಾ ಡ್ರೈವರ್ ತಮ್ಮ ಮಗಳಿಗೆ ಪ್ರೀತಿಸುವಂತೆ ಪೀಡಿಸುತ್ತಿದ್ದ ವಿಚಾರದ ಬಗ್ಗೆ ಪೋಷಕರು ಶಾಲಾ ಆಡಳಿತ ಮಂಡಳಿಗೆ ದೂರು ನೀಡಿದರೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದು ಮೃತದೇಹಗಳನ್ನು ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಶವಪರೀಕ್ಷೆ ನಡೆಸಲಾಗಿದೆ.

ಈ ಸಂಬಂಧ ಖಾಸಗಿ ಶಾಲಾ ಆಡಳಿತ ಮಂಡಳಿ ವಿರುದ್ಧ ಅಜ್ಜಂಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave A Reply

Your email address will not be published.