ಗರ್ತಿಕೆರೆ ; ಎಮ್ಮೆಗೆ ಸ್ಕೂಟಿ ಡಿಕ್ಕಿಯಾಗಿ ಸವಾರನ ಸ್ಥಿತಿ ಗಂಭೀರ

Written by Mahesha Hindlemane

Published on:

ರಿಪ್ಪನ್‌ಪೇಟೆ ; ಗರ್ತಿಕೆರೆಯ ಅವುಕ ಸರ್ಕಲ್ ಬಳಿ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಗಾಯಾಳುವನ್ನು ಶಂಕರಹಳ್ಳಿ ಗ್ರಾಮದ ಭಾಸ್ಕರ್ ಶೆಟ್ಟಿ ಎಂದು ಗುರುತಿಸಲಾಗಿದೆ. ತಡರಾತ್ರಿ ಅವುಕ ಸರ್ಕಲ್ ಬಳಿ ಸ್ಕೂಟಿಯಲ್ಲಿ ಸಂಚರಿಸುತ್ತಿದ್ದ ಭಾಸ್ಕರ್ ಶೆಟ್ಟಿಗೆ ರಸ್ತೆ ದಾಟುತ್ತಿದ್ದ ಎಮ್ಮೆಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದ ವೇಳೆ ಭಾಸ್ಕರ್ ಶೆಟ್ಟಿ ತಲೆಗೆ ಗಂಭೀರ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿದೆ ಎನ್ನಲಾಗಿದೆ.

ಗಾಯಾಳುವಿಗೆ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ರವಾನಿಸಲಾಗಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Comment