ಭೀಮಣ್ಣ ಖಂಡ್ರೆ ಅಗಲಿಕೆಗೆ ಮಳಲಿ ಶ್ರೀಗಳ ಸಂತಾಪ

Written by Mahesha Hindlemane

Published on:

ರಿಪ್ಪನ್‌ಪೇಟೆ ; ಅಖಿಲ ಭಾರತ ವೀರಶೈವ ಮಹಾಸಭಾದ ಮಾಜಿ ಅಧ್ಯಕ್ಷ ಭೀಮಣ್ಣ ಖಂಡ್ರೆ ಅವರ ಅಗಲಿಕೆಗೆ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷರಾದ ಮಳಲಿ ಸಂಸ್ಥಾನಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ತಮ್ಮ ಸಂತಾಪ ಸೂಚಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಭೀಮಣ್ಣ ಖಂಡ್ರೆ ಅವರು ಸಾರಿಗೆ ಸಚಿವ ಹುದ್ದೆ ಸೇರಿದಂತೆ ಹಲವಾರು ಉನ್ನತ ಹುದ್ದೆಗಳನ್ನು ಅಲಂಕರಿಸಿದವರಾಗಿದ್ದರು. ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿ ಸಮಾಜವನ್ನು ಒಗ್ಗೂಡಿಸುವ ಮಹತ್ಕಾರ್ಯವನ್ನು ಮಾಡಿದ್ದಾರೆ. ಅವರ ಆತ್ಮಕ್ಕೆ ಪರಮಾತ್ಮನು ಚಿರಶಾಂತಿ ಅನುಗ್ರಹಿಸಲಿ ಅವರ ಅಗಲಿಕೆ ನೋವನ್ನು ಸಹಿಸುವ ಶಕ್ತಿ ಅವರ ಕುಟುಂಬ ವರ್ಗಕ್ಕೆ ಅನುಗ್ರಹಿಸಲಿ ಎಂದು ತಿಳಿಸಿದ್ದಾರೆ.

Leave a Comment