ಒಪಿಎಸ್ ಜಾರಿಗೆ ಆಗ್ರಹಿಸಿ ಪ್ರತಿಭಟನೆ
ಶಿವಮೊಗ್ಗ : ಹೊಸ ಪಿಂಚಣಿ ಯೋಜನೆ ರದ್ದುಪಡಿಸಿ ಹಳೇ ಪಿಂಚಣಿ ವ್ಯವಸ್ಥೆಯನ್ನೇ ಜಾರಿ ಮಾಡಲು ಆಗ್ರಹಿಸಿ ಸೌತ್ ವೆಸ್ಟರ್ನ್ ರೈಲ್ವೆ ಮಂಜ್ದೂರ್ ಯೂನಿಯನ್ ವತಿಯಿಂದ ಇಲ್ಲಿನ ರೈಲ್ವೆ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಲಾಯಿತು.
ಹಳೇ ಪಿಂಚಣಿ ಯೋಜನೆಯನ್ನು ಜಾರಿ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
01-01-2004ರ ನಂತರ ನೇಮಕಾತಿಯಾದ ಎಲ್ಲಾ ರೈಲ್ವೆ ಕಾರ್ಮಿಕರಿಗೆ ಹೊಸ ಪಿಂಚಣಿ ಪದ್ಧತಿಯನ್ನು ರದ್ದುಮಾಡಿ ಈ ಹಿಂದೆ ಇದ್ದ ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು. ಹೊಸ ಪಿಂಚಣಿ ಯೋಜನೆಯಲ್ಲಿ ಯಾವ ಕನಿಷ್ಠ ಸೌಲಭ್ಯಗಳು ಇಲ್ಲ. ಹಳೇ ಪಿಂಚಣಿ ಯೋಜನೆಯಲ್ಲಿ ನಮ್ಮ ಮೂಲ ಸಂಬಳಕ್ಕೆ ಅನುಸಾರವಾಗಿ ಬಡ್ತಿಯಾಗುತ್ತದೆ. ಇದರಿಂದ ನಮಗೆ ಭದ್ರತೆ ಸಿಗುತ್ತದೆ ಎಂದು ಪ್ರತಿಭಟನಕಾರರು ತಿಳಿಸಿದರು.
ಈ ಸಂದರ್ಭದಲ್ಲಿ ರೈಲ್ವೆ ಮಜ್ದೂರು ಯೂನಿಯನ್ ಜಿಲ್ಲಾ ಘಟಕದ ಸದಸ್ಯರು ಹಾಜರಿದ್ದರು.