ಹೊಸನಗರ: ಮಾರುತಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೇಲಿನ ಸಂಪಳ್ಳಿ ಗ್ರಾಮದ ಮಂಕೋಡು ಪ್ರದೇಶದಲ್ಲಿ ಸುಮಾರು 5೦೦ ಅಡಿ ಆಳದ ಜೆಜಿಎಂ (JJM) ಕೊರೆದ ಕೊಳವೆ ಬಾವಿಯನ್ನು ಮುಚ್ಚದೆ ಬಿಟ್ಟು ನಿರ್ಲಕ್ಷ್ಯ ವಹಿಸಿರುವುದು ಸ್ಥಳೀಯರಲ್ಲಿ ತೀವ್ರ ಆತಂಕ ಉಂಟುಮಾಡಿದೆ.
ಗ್ರಾಮದ ಸಾರ್ವಜನಿಕ ಸ್ಥಳದ ಸಮೀಪದಲ್ಲಿರುವ ಈ ಕೊಳವೆ ಬಾವಿ ಬಹಳ ದಿನಗಳಿಂದ ಮುಚ್ಚದೇ ಇರುವುದಾಗಿ ಗ್ರಾಮಸ್ಥರು ಆರೋಪಿಸಿದ್ದಾರೆ. ಸಂಬಂಧಿಸಿದ ಅಧಿಕಾರಿಗಳು ಈ ವಿಷಯದಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪವೂ ಕೇಳಿಬರುತ್ತಿದೆ
ಗ್ರಾಮಸ್ಥರು ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಕೊಳವೆ ಬಾವಿಯನ್ನು ಸುರಕ್ಷಿತವಾಗಿ ಮುಚ್ಚುವಂತೆ ಆಗ್ರಹಿಸಿದ್ದಾರೆ. ಅಪಾಯ ಸಂಭವಿಸುವ ಮುನ್ನವೇ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಸ್ಥಳೀಯ ಆಡಳಿತ ಮತ್ತು ಸಂಬಂಧಪಟ್ಟ ಇಲಾಖೆಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ತ್ವರಿತ ಕ್ರಮ ಕೈಗೊಳ್ಳಬೇಕಿದೆ ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.
ಹೊಸನಗರ ; ಶಾಸಕ ಆರಗ ಜ್ಞಾನೇಂದ್ರ ಸಹಾಯಕನಿಗೆ ನ್ಯಾಯಾಂಗ ಬಂಧನ !
MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650





