SHIVAMOGGA | ನಾನು ಸೋತಿರಬಹುದು ಆದರೆ ಶಿವಮೊಗ್ಗ ಬಿಟ್ಟು ಹೋಗಲ್ಲ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ (Shivamogga Loksabha Constituency) ಕಾಂಗ್ರೆಸ್ (Congress) ಅಭ್ಯರ್ಥಿಯಾಗಿದ್ದ ಗೀತಾ ಶಿವರಾಜ್ಕುಮಾರ್ (Geetha Shivarajkumar) ಹೇಳಿದರು.
Read More:Gruhalakshmi Scheme | ಈ ಜಿಲ್ಲೆಗಳಿಗೆ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಕ್ರೆಡಿಟ್
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಸುಮಾರು 5.35 ಲಕ್ಷ ಮತಗಳು ಬಂದಿವೆ. ಇದೇನು ಕಡಿಮೆಯೇನಲ್ಲ. ಕಳೆದ ಸಲಕ್ಕಿಂತಲೂ ದುಪ್ಪಟ್ಟು ಮತ ಪಡೆದಿರುವೆ.
ಚುನಾವಣೆ ಎಂದರೆ ಸೋಲು, ಗೆಲುವು ಇದ್ದೇ ಇರುತ್ತದೆ. ಯಾರಾದರೂ ಒಬ್ಬರು ಗೆಲ್ಲಲೇ ಬೇಕಲ್ಲವೇ? ಚುನಾವಣೆಯಲ್ಲಿ ನಾವು ಮತ್ತು ನಮ್ಮ ಪಕ್ಷ ಮಾಡಬೇಕಾದ ಕೆಲಸ ಮಾಡಿದ್ದೇವೆ. ಗೆಲ್ಲುವ ವಿಶ್ವಾಸವಿತ್ತು. ಆದರೆ, ಸೋತಿದ್ದೇನೆ. ಗೆದ್ದವರಿಗೆ ಅಭಿನಂದನೆ. ಅವರು ಒಳ್ಳೆಯ ಕೆಲಸ ಮಾಡಲಿ ಎಂದರು.

ಸೋಲಿನ ಹೊಣೆಯನ್ನು ಯಾರ ಮೇಲೂ ಹೊರಿಸಲು ನನಗೆ ಇಷ್ಟವಿಲ್ಲ. ಸೋಲಿನ ಹೊಣೆಯನ್ನು ನಾವು ತೆಗೆದುಕೊಳ್ಳುವುದಿಲ್ಲ. ಏಕೆಂದರೆ ನಾವು ಯಾರೂ ತಪ್ಪು ಮಾಡಿಲ್ಲ. ಎಲ್ಲರೂ ಅವರವರ ಕೆಲಸ ಮಾಡಿದ್ದಾರೆ.
ಬಿಸಿಲು, ಮಳೆ ಎನ್ನದೇ, ನನ್ನ ಪರವಾಗಿ ನನಗಿಂತ ಹೆಚ್ಚು ಕೆಲಸವನ್ನು ಮಹಿಳಾ ಕಾರ್ಯಕರ್ತರು ಸೇರಿದಂತೆ ಎಲ್ಲರೂ ಮಾಡಿದ್ದಾರೆ. ಸೋತಿರಬಹುದು ಅದಕ್ಕಾಗಿ ದುಃಖವಿಲ್ಲ. ಮುಂದೆ ಚುನಾವಣೆಗಳು ಮತ್ತೆ ಬರುತ್ತವೆ. ಮತ್ತಷ್ಟು ಶಕ್ತಿ ತುಂಬುವ ಕೆಲಸವನ್ನು ನಾವು ಮಾಡುತ್ತೇವೆ ಎಂದರು.
Read More :Hosanagara Rain | ಹುಲಿಕಲ್ಲಿನಲ್ಲಿ ಅತ್ಯಧಿಕ 96 ಮಿ.ಮೀ. ಮಳೆ ದಾಖಲು, ಮತ್ತೆಲ್ಲೆಲ್ಲಿ ಎಷ್ಟು ಮಳೆಯಾಗಿದೆ ?
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
ShivamoggaJune 3, 2025ಸಂಪತ್ತಿನೊಂದಿಗೆ ಒಂದಿಷ್ಟಾದರೂ ಧರ್ಮ ಪ್ರಜ್ಞೆ ಅವಶ್ಯಕ ; ರಂಭಾಪುರಿ ಜಗದ್ಗುರುಗಳು
RipponpeteJune 3, 2025ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನದ 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದ ಬಿ.ವೈ. ರಾಘವೇಂದ್ರ ಶಿಲನ್ಯಾಸ
RipponpeteJune 2, 2025ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳು ಶಿವಮೊಗ್ಗ ಬೆಕ್ಕಿನಕಲ್ಮಠಕ್ಕೆ ಭೇಟಿ
RipponpeteJune 1, 2025ಶ್ರುತಪಂಚಮಿ ಆಚರಣೆ | ಜೈನಧರ್ಮ ಸಿದ್ಧಾಂತಗಳು ಜೀವನ ಮೌಲ್ಯಗಳನ್ನು ವರ್ಧಿಸುತ್ತದೆ ; ಹೊಂಬುಜ ಶ್ರೀಗಳು