ಒಂದು ಕೋಟಿ ರೂ. ವೆಚ್ಚದ ಶಾಂತಪುರ-ಗರ್ತಿಕೆರೆ ಸಂಪರ್ಕ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ

Written by Mahesha Hindlemane

Published on:

ರಿಪ್ಪನ್‌ಪೇಟೆ ; ತತ್ವಸಿದ್ದಾಂತದ ಮೇಲೆ ಬೆಳೆದು ಬಂದವನನ್ನು ಯಾವುದೇ ಪ್ರತಿಫಲಾಫೇಕ್ಷೆ ಇಲ್ಲದೆ ಕೆಲಸ ಮಾಡಿ ಜನರಿಗೂ ಸಂತೋಷವಾಗುವುದರೊಂದಿಗೆ ಸಂಘಟನೆಗೂ ಪಕ್ಷಕ್ಕೂ ಲಾಭವಾಗುತ್ತದೆ ಎಂದು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಅಮೃತ-ಕೋಡೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಶಾಂತಪುರ-ಗರ್ತಿಕೆರೆ ಸಂಪರ್ಕದ ರಸ್ತೆಗೆ ಪಿಎಂ.ಜಿ.ಎಸ್.ವೈ ಯೋಜನೆಯಡಿ 1 ಕೋಟಿ ರೂ. ವೆಚ್ಚದ ಅನುದಾನವನ್ನು ಬಿಡುಗಡೆ ಮಾಡಿಸುವ ಮೂಲಕ ಸಂಪರ್ಕ ರಸ್ತೆ ಅಭಿವೃದ್ದಿಗೆ ಚಾಲನೆ ನೀಡಿ ಮಾತನಾಡಿದ ಅವರು, ಎಂದಿಗೂ ನಾನು ಮತ ಕೊಡದವರು ಮತಕೊಟ್ಟವರು ಎಂಬ ಯಾವುದೇ ತಾರತಮ್ಯ ಮಾಡದೇ ನಮ್ಮ ಕ್ಷೇತ್ರದ ಮತದಾರರು ನಮ್ಮವರು ಎಂದು ತಿಳಿದು ಕ್ಷೇತ್ರದಲ್ಲಿ ಹಂತಹಂತವಾಗಿ ಅಭಿವೃದ್ದಿ ಕಾರ್ಯಗಳನ್ನು ಮಾಡಿಕೊಂಡು ಬಂದವನು ಎಂದರು.

ನಮ್ಮ ಪಕ್ಷ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ನಾನು ಮಂತ್ರಿಯಾಗುತ್ತೇನೆಂಬ ಕನಸು ಕಂಡವನಲ್ಲ. ಮಂತ್ರಿಯಾಗಿ ಚಿಕ್ಕಮಗಳೂರಿಗೆ ತೆರಳುವ ವೇಳೆಯಲ್ಲಿ ನನ್ನ ವಾಹನದ ಮುಂದೆ ಪೊಲೀಸ್ ಭದ್ರತಾ ವಾಹನ ಹೊರಟಾಗ ಸೈರನ್ ಹಾಕಬೇಡಿ ನಾನು ಸದಾ ಜನರ ಜೊತೆ ಬೆಳೆದು ಬಂದವನ್ನು ಅಧಿಕಾರ ಎಂದಿಗೂ ಶಾಶ್ವತವಲ್ಲ ನಮಗೆ ಮತದಾರರೇ ಶಾಶ್ವತ ಎಂದು ತಿಳಿದವನು ಎಂದು ಹೇಳಿದೆ. ಅದೇ ರೀತಿಯಲ್ಲಿ ನಡೆದುಕೊಂಡೆ ಎಂದು ತಮ್ಮ ರಾಜ್ಯ ಗೃಹ ಸಚಿವನಾಗಿದ್ದಾಗಿನ ತಮ್ಮ ಅನುಭವದ ಮಾತುಗಳನ್ನು ಮೇಲಕು ಹಾಕಿದ ಅವರು, ಕಾಮಗಾರಿಯನ್ನು ಗುಣಮಟ್ಟದಲ್ಲಿ ನಿರ್ವಹಿಸುವಂತೆ ಗುತ್ತಿಗೆದಾರನಿಗೆ ಸೂಚಿಸಿ ಆದಷ್ಟು ಬೇಗ ಕಾಮಗಾರಿ ಮುಗಿಸುವಂತೆ ಆದೇಶಿದರು.

ಕೋಡೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರಕಾಶ, ಅಮೃತ ಗ್ರಾ.ಪಂ. ಮಾಜಿ ಅಧ್ಯಕ್ಷ ಸಚಿನಗೌಡ, ಸದಸ್ಯರಾದ ಲಿಂಗರಾಜು, ವಿಶ್ವನಾಥ್ ಗಂದ್ರಳ್ಳಿ, ಮಂಜುಳಾ, ದೇವರಾಜ್ ಸೋಮಣ್ಣ, ದಿನೇಶ್, ಶೇಖರಪ್ಪ, ಯೋಗೇಂದ್ರಪ್ಪ, ಗ್ರಾಮಸ್ಥರು ಪಕ್ಷದ ಮುಖಂಡರು ಇನ್ನಿತರರು ಹಾಜರಿದ್ದರು.

Leave a Comment