ಹೊಸನಗರ ; ತಾಲ್ಲೂಕಿನಲ್ಲಿ ಸೋಮವಾರ ಎಸ್ಎಸ್ಎಲ್ಸಿಯ ವಿಜ್ಞಾನ ಪರೀಕ್ಷೆಯು ಏಳು ಕೇಂದ್ರಗಳಲ್ಲಿ ನಡೆಸಲಾಗಿದ್ದು ಏಳು ಕೇಂದ್ರಗಳಿಗೂ ಶಿವಮೊಗ್ಗ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಡಿ.ಡಿಪಿ.ಐ (ಅಭಿವೃದ್ಧಿ) ಕೃಷ್ಣಮೂರ್ತಿ ಹೆಚ್.ಆರ್, ಹೊಸನಗರ ತಹಸೀಲ್ದಾರ್ ಭರತ್ರಾಜ್, ತಾಲ್ಲೂಕು ಕಾರ್ಯರ್ವಹಣಾಧಿಕಾರಿ ನರೇಂದ್ರಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ವೈ ಗಣೇಶ್ ಇನ್ನೂ ಮುಂತಾದವರು ಪರೀಕ್ಷೆ ಬರೆಯುವ ವಿರ್ದ್ಯಾರ್ಥಿಗಳಿಗೆ ಯಾವುದೇ ರೀತಿಯಲ್ಲಿಯೂ ತೊಂದರೆಯಾಗದಂತೆ ಭೇಟಿ ನೀಡಿ ಪರಿಶೀಲಿಸಿದರು.

ಸುಸೂತ್ರವಾಗಿ ನಡೆದ ವಿಜ್ಞಾನ ಪರೀಕ್ಷೆ ;
ಎಸ್ಎಸ್ಎಲ್ಸಿ ವಿಜ್ಞಾನ ಪರೀಕ್ಷೆ ಸೋಮವಾರ ನಡೆದಿದ್ದು ಹೊಸನಗರ ತಾಲ್ಲೂಕಿನ ಏಳು ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಯಾವುದೇ ರೀತಿಯಲ್ಲಿಯೂ ತೊಂದರೆಯಾಗದಂತೆ ಪರೀಕ್ಷೆ ನಡೆದಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ತಿಳಿಸಿದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





