ಶಾಲಾ ಬಸ್ ಹರಿದು ಒಂದೂವರೆ ವರ್ಷದ ಮಗು ಸಾವು !

Written by Mahesha Hindlemane

Published on:

ಶಿವಮೊಗ್ಗ ; ಶಾಲಾ ಬಸ್ ಡಿಕ್ಕಿ ಹೊಡೆದು ಒಂದೂವರೆ ವರ್ಷದ ಮಗುವೊಂದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಗರದ ಗೋಪಾಲಗೌಡ ಬಡಾವಣೆಯಲ್ಲಿ ಇಂದು ಮಧ್ಯಾಹ್ನ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಮೃತ ಮಗುವನ್ನು ಗೋಪಾಲಗೌಡ ಬಡಾವಣೆಯ ನಿವಾಸಿ ಮಂಜುನಾಥ್ ಎನ್ನುವವರ ಪುತ್ರ ಒಂದೂವರೆ ವರ್ಷದ ಆರ್ಯನ್ ಎಂದು ಗುರುತಿಸಲಾಗಿದೆ. 

ಹೇಗಾಯ್ತು ಘಟನೆ ?

ಮಂಜುನಾಥ್ ಅವರ ಇನ್ನೊಬ್ಬ ಮಗ ಆರುಷ್ ಎನ್ನುವವನು ನಗರದ ಖಾಸಗಿ ಶಾಲೆಯಲ್ಲಿ ಓದುತ್ತಿದ್ದು ಇಂದು ಮಧ್ಯಾಹ್ನ ಆರುಷ್ ಶಾಲಾ ಬಸ್‌ನಲ್ಲಿ ಮನೆಗೆ ವಾಪಸ್ ಬಂದಿದ್ದಾನೆ. ಆರುಷ್’ನನ್ನು ಮನೆಗೆ ಕರೆತರಲು ಮನೆ ಕೆಲಸದ ಮಹಿಳೆ ಬಸ್‌ನಿಂದ ಇಳಿಸಿಕೊಳ್ಳಲು ಹೋಗಿದ್ದರು. ಈ ವೇಳೆ ಆಕೆಯ ಹಿಂದೆಯೇ ಆರ್ಯನ್ ಹೋಗಿದ್ದು ಕೆಲಸದ ಮಹಿಳೆ ಆರುಷ್’ನನ್ನು ಬಸ್‌ನಿಂದ ಇಳಿಸಿಕೊಳ್ಳುವ ವೇಳೆ ಆರ್ಯನ್ ಬಸ್ ಮುಂಭಾಗದಲ್ಲಿ ರಸ್ತೆ ದಾಟುತ್ತಿದ್ದನು ಎನ್ನಲಾಗಿದೆ. ಆದರೆ, ಇದನ್ನು ಗಮನಿಸದ ಬಸ್ ಚಾಲಕ ಬಸ್‌ಅನ್ನು ಚಾಲನೆ ಮಾಡಿದ ಪರಿಣಾಮ ಮಗುವಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.

ಘಟನೆಯಿಂದ ಮಗುವಿನ ತಲೆ ಹಾಗೂ ಮುಖಕ್ಕೆ ತೀವ್ರ ಪೆಟ್ಟಾಗಿದ್ದು, ತಕ್ಷಣವೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಆಸ್ಪತ್ರೆ ತಲುಪುವ ವೇಳೆಗಾಗಲೇ ಮಗು ಉಸಿರು ಚೆಲ್ಲಿತ್ತು ಎಂದು ತಿಳಿದುಬಂದಿದೆ.

ಘಟನೆ ಸಂಬಂಧ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

Leave a Comment