ರಿಪ್ಪನ್ಪೇಟೆ ; ಇಲ್ಲಿನ ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಯಕ ಸ್ವಾಮಿ ಹಾಗೂ ಶ್ರೀ ಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ `ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀ ಅನ್ನಪೂರ್ಣೇಶ್ವರಿ ಅಮ್ಮನವರ ಶ್ರೀಮನ್ಮಹಾರಥೋತ್ಸವ ಜಾತ್ರೋತ್ಸವ’ ಹಾಗೂ ಪ್ರತಿಷ್ಟಾ ವರ್ಧಂತ್ಯುತ್ಸವವು ವೈಭವದೊಂದಿಗೆ ಸಂಪನ್ನಗೊಂಡಿತು.
ಶಿವಮೊಗ್ಗ ವೇದ ವಿದ್ವಾನ ವಸಂತಭಟ್ ಮತ್ತು ಪುರೋಹಿತ ತಂಡದವರು ಪೌರೋಹಿತತ್ವದಲ್ಲಿ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀ ಅನ್ನಪೂರ್ಣೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಫಲನ್ಯಾಸ ಪೂರ್ವಕ ದೇವತಾ ಪ್ರಾರ್ಥನೆ, ಗಣಪತಿ ಪೂಜೆ ಸ್ವಸ್ತಿ ಪುಣ್ಯಾಹವಾಚನ, ಗ್ರಹಯಾಗ, ನಾಂದಿ, ಕೌತುಕ ಬಂಧನ, ಅಂಕುರಾರ್ಪಣ, ಧ್ವಜಾರೋಹಣ, ಬಲಿ ಸಂಜೆ ಭೇರಿತಾಡನ, ಅಧಿವಾಸ ಹೋಮ, ಬಲಿ ಪೂಜಾದಿಗಳು, ರಂಗಪೂಜೆ, ರಥಾ ದಿವಾಸ ಹೋಮ, ರಥ ಪೂಜಾ, ಬಲಿ ಪ್ರಭೋದೋತ್ಸವ ತೀರ್ಥಯಾತ್ರ ಅವಭೃತ, ಕೌತುಕ ವಿಸರ್ಜನ, ಧ್ವಜಾವರೋಹಣ, ಮಹಾಪೂಜೆ ಮಂತ್ರಾಕ್ಷತೆ,
ಗಣಪತಿ ಮತ್ತು ಅಮ್ಮನವರಿಗೆ ಕುಂಭಾಭಿಷೇಕ, ಮಹಾಪೂಜೆ ಮಹಾಮಂಗಳಾರತಿ ತೀರ್ಥಪ್ರಸಾದ ವಿನಿಯೋಗ ಹಾಗೂ ಮಧ್ಯಾಹ್ನ ಸಾಮೂಹಿಕ ಅನ್ನಸಂತರ್ಪಣೆ ಜರುಗಿತು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





