ಕೆಎಸ್‌ಆರ್‌ಟಿಸಿ ಬಸ್-ಬೈಕ್ ಮುಖಾಮುಖಿ ಡಿಕ್ಕಿ ; ಓರ್ವ ಸ್ಥಳದಲ್ಲೇ ಸಾವು !

Written by Mahesha Hindlemane

Published on:

ಶಿವಮೊಗ್ಗ : ತಾಲೂಕಿನ ಸುತ್ತುಕೋಟೆಯ ಪೆಟ್ರೋಲ್ ಬಂಕ್ ಮುಂಭಾಗ ಗುರುವಾರ ಸಂಜೆ ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಮುಖಾಮುಖಿ ಅಪಘಾತ ಸಂಭವಿಸಿದೆ. ಈ ಘಟನೆದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಮೃತನನ್ನು ಅಬ್ನಾನ್ (23) ಎಂದು ಗುರುತಿಸಲಾಗಿದೆ. ಕೆಎಸ್‌ಆರ್‌ಟಿಸಿ ಬಸ್ ಶಿಕಾರಿಪುರದಿಂದ ಶಿವಮೊಗ್ಗ ಕಡೆಗೆ ಪ್ರಯಾಣಿಸುತ್ತಿತ್ತು. ಬೈಕ್ ಸವಾರರು ಶಿವಮೊಗ್ಗದಿಂದ ಶಿಕಾರಿಪುರದ ಕಡೆಗೆ ತೆರಳುತ್ತಿರುವಾಗ ಈ ದುರ್ಘಟನೆ ನಡೆದಿದೆ.

ಸುತ್ತುಕೋಟೆಯ ಶ್ರೀ ಸಪ್ತಕೋಟಿ ಪೆಟ್ರೋಲ್ ಬಂಕ್ ಬಳಿ ಬೈಕ್ ಬಸ್‌ನ ಮುಂಭಾಗಕ್ಕೆ ನೇರವಾಗಿ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಬೈಕಿಗೆ ಬೆಂಕಿ ಹತ್ತಿಕೊಂಡಿತು. ಈ ಬೆಂಕಿ ಕಾರಣದಿಂದ ಬೈಕ್ ಸವಾರರ ದೇಹಕ್ಕೂ ಬೆಂಕಿ ಹತ್ತಿರುವುದಾಗಿ ತಿಳಿದು ಬಂದಿದೆ.

ಅಪಘಾತದಿಂದಾಗಿ ಬಸ್‌ನ ಪ್ರಯಾಣಿಕರು ಎಮರ್ಜೆನ್ಸಿ ಬಾಗಿಲು ಮತ್ತು ಕಿಟಕಿಗಳಿಂದ ಹೊರಗೆ ಹೊರಬಂದಿದ್ದಾರೆ. ಈ ಘಟನೆ ಕಾರಣದಿಂದ ಸವಳಂಗ ರಸ್ತೆ ಕೆಲ ನಿಮಿಷಗಳ ಕಾಲ ಸಂಚಾರ ನಿರ್ಬಂಧಿತಗೊಂಡಿತ್ತು.

ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ ಡಿವೈಎಸ್‌ಪಿ ಸಂಜೀವ್ ಕುಮಾರ್, ಕುಂಸಿ ಠಾಣೆಯ ಪಿಎಸ್‌ಐ ಪಾರ್ವತಿ ಬಾಯಿ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Comment