ಶಿವಮೊಗ್ಗ : ಕಳೆದ ವಾರ ಸುರಿದ ತೀವ್ರ ಮಳೆಗೆ ಶಿವಮೊಗ್ಗ ಜಿಲ್ಲೆಯ ಕುಂಚೇನಹಳ್ಳಿ ಗ್ರಾಮದಲ್ಲಿ ಗಂಗಾಬಾಯಿ ಅವರ ಮನೆಯಲ್ಲಿ ಗೋಡೆ ಕುಸಿದು ಗಂಭೀರ ನಷ್ಟವಾಗಿದೆ.
ಮಳೆಯ ಪರಿಣಾಮವಾಗಿ ಮನೆಯ ಗೋಡೆ ಸಂಪೂರ್ಣವಾಗಿ ಕುಸಿತಗೊಂಡಿದ್ದು, ಮನೆಯಲ್ಲಿದ್ದ ಸಾಮಾನುಗಳು ಕೂಡ ಹಾನಿಗೊಳಗಾಗಿವೆ. ಈ ದುರ್ಘಟನೆಗೆ ಸಂಬಂಧಿಸಿದಂತೆ ಮನೆ ಮಾಲೀಕರು ಸ್ಥಳೀಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಕುಟುಂಬಸ್ಥರು ತೀವ್ರ ಆತಂಕದಲ್ಲಿದ್ದು, ತಮ್ಮ ಜೀವನೋಪಾಯಕ್ಕೆ ಬೆದರಿಕೆ ಉಂಟಾಗಿರುವ ಕಾರಣ ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.
ಕುಟುಂಬವು ಮನೆ ಕಳೆದುಕೊಂಡು ಬೀದಿಪಾಲಾಗಿರುವುದರಿಂದ, ತುರ್ತು ಪರಿಹಾರ ಮತ್ತು ಮನೆ ನವೀಕರಣಕ್ಕೆ ಸರ್ಕಾರದ ಸಹಾಯ ಅಗತ್ಯವಿದೆ ಎಂದು ಅವರು ಒತ್ತಾಯಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





