ಶಿವಮೊಗ್ಗದಲ್ಲಿ ಕ್ರೇನ್‌ಗೆ ಸಿಲುಕಿ ಕಾರ್ಮಿಕ ದುರ್ಮರಣ

Written by Mahesha Hindlemane

Published on:

ಶಿವಮೊಗ್ಗ : ಹೊಸಮನೆ ದೊಡ್ಡಮ್ಮ ದೇವಸ್ಥಾನದ ಬಳಿ ಶನಿವಾರ ಸಂಜೆ ಕ್ರೇನ್‌ಗೆ ಸಿಲುಕಿ ಕೂಲಿ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಮೃತನನ್ನು ಬೆಳ್ತಂಗಡಿ ತಾಲ್ಲೂಕಿನ ಪಿಲಿಗೂಡು ನಿವಾಸಿ ನಾಗೇಶ್ (45) ಎಂದು ಗುರುತಿಸಲಾಗಿದೆ. ಅವರಿಗೆ ಪತ್ನಿ ಮತ್ತು ಇಬ್ಬರು ಮಕ್ಕಳಿದ್ದು, ಶುಕ್ರವಾರ ದೇವಸ್ಥಾನದ ಕಾಮಗಾರಿಯಲ್ಲಿ ಕೆಲಸ ಮಾಡಲು ಶಿವಮೊಗ್ಗಕ್ಕೆ ಬಂದಿದ್ದರು.

ಕಾರ್ಮಿಕರು ಕೆಲಸ ಮಾಡುವ ವೇಳೆ ಕ್ರೇನ್ ಚಾಲಕನ ಅಜಾಗರೂಕತೆಯಿಂದ ನಾಗೇಶ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಈ ಘಟನೆ ಸ್ಥಳದಲ್ಲಿ ಆತಂಕದ ವಾತಾವರಣವನ್ನು ಉಂಟುಮಾಡಿತು.

ಘಟನೆಯ ಬಗ್ಗೆ ಸಂಬಂಧಿತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪ್ರಕರಣದ ತನಿಖೆಯನ್ನು ಮುಂದುವರೆಸಿದ್ದಾರೆ.

Leave a Comment