ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಗೆ ಅರ್ಜಿ ಆಹ್ವಾನ ; ಜುಲೈ 31 ಕೊನೆಯ ದಿನ

Written by Mahesha Hindlemane

Updated on:

ಹೊಸನಗರ : 2026-27ನೇ ಸಾಲಿನ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ವಿಮೆ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೊಸನಗರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಫಸಲು ಬಿಡುವಂತಹ ಅಡಿಕೆ, ಮಾವು, ಕಾಳುಮೆಣಸು ಮತ್ತು ನಾಟಿ ಮಾಡಿರುವಂತಹ ಶುಂಠಿ ಬೆಳೆಗಳಿಗೆ ರೈತರು ವಿಮೆ ಮಾಡಿಸಬಹುದಾಗಿದೆ. ಆಸಕ್ತ ರೈತರು ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ, ಗ್ರಾಮ ಒನ್ ಅಥವಾ ಬ್ಯಾಂಕ್‌ಗಳಲ್ಲಿ ದಿನಾಂಕ 31-07-2026 ರ ಒಳಗೆ ವಿಮೆ ಕಂತನ್ನು ಪಾವತಿಸಬೇಕಾಗಿ ವಿನಂತಿಸಲಾಗಿದೆ.

ವಿಮೆಗೆ ಒಳಪಡುವ ಘಟಕ ಪ್ರದೇಶ :

ಆಡಿಕೆ : ಶಿವಮೊಗ್ಗ ಜಿಲ್ಲೆಯ ತಾಲೂಕುಗಳ ಎಲ್ಲಾ ಗ್ರಾಮ ಪಂಚಾಯತಿ ವ್ಯಾಪ್ತಿ
ಕಾಳುಮೆಣಸು : ಶಿವಮೊಗ್ಗ, ಜಿಲ್ಲೆಯ ತಾಲೂಕುಗಳ ಎಲ್ಲಾ ಗ್ರಾಮ ಪಂಚಾಯತಿ ವ್ಯಾಪ್ತಿ
ಶುಂಠಿ : ಶಿವಮೊಗ್ಗ ಜಿಲ್ಲೆಯ ತಾಲ್ಲೂಕುಗಳ ಎಲ್ಲಾ ಗ್ರಾಮ ಪಂಚಾಯತಿ ವ್ಯಾಪ್ತಿ
ಮಾವು : ಶಿವಮೊಗ್ಗ, ಸೊರಬ ಮತ್ತು ಶಿಕಾರಿಪುರ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿ ವ್ಯಾಪ್ತಿ

ರೈತರು ಪಾವತಿಸಬೇಕಾದ ವಿಮಾ ಕಂತಿನ ವಿವರ :

ಅಡಿಕೆ : ಪ್ರತಿ ಹೆಕ್ಟೇರ್‌ಗೆ ವಿಮಾ ಮೊತ್ತ ರೂ. 1,28,000 ಆಗಿದ್ದು, ರೈತರು ಪ್ರತಿ ಎಕರೆಗೆ ರೂ. 2560 ಅಥವಾ ಪ್ರತಿ ಗುಂಟೆಗೆ ರೂ. 64 ಪಾವತಿಸಬೇಕು.

ಮಾವು: ಪ್ರತಿ ಹೆಕ್ಟೇರ್‌ಗೆ ವಿಮಾ ಮೊತ್ತ ರೂ. 80,000 ಆಗಿದ್ದು, ರೈತರು ಪ್ರತಿ ಎಕರೆಗೆ ರೂ. 3200 ಅಥವಾ ಪ್ರತಿ ಗುಂಟೆಗೆ ರೂ. 80 ಪಾವತಿಸಬೇಕು.

ಕಾಳುಮೆಣಸು: ಪ್ರತಿ ಹೆಕ್ಟೇರ್‌ಗೆ ವಿಮಾ ಮೊತ್ತ ರೂ. 47,000 ಆಗಿದ್ದು, ರೈತರು ಪ್ರತಿ ಎಕರೆಗೆ ರೂ. 1692 ಅಥವಾ ಪ್ರತಿ ಗುಂಟೆಗೆ ರೂ. 42.30 ಪಾವತಿಸಬೇಕು.

ಶುಂಠಿ: ಪ್ರತಿ ಹೆಕ್ಟೇರ್‌ಗೆ ವಿಮಾ ಮೊತ್ತ ರೂ. 1,30,000 ಆಗಿದ್ದು, ರೈತರು ಪ್ರತಿ ಎಕರೆಗೆ ರೂ. 2600 ಅಥವಾ ಪ್ರತಿ ಗುಂಟೆಗೆ ರೂ. 65 ಪಾವತಿಸಬೇಕು.

ಮೇಲ್ಕಂಡ ಬೆಳೆಗಳನ್ನು ಬೆಳೆದಿರುವ ತಾಲೂಕಿನ ರೈತರು ಈ ಯೋಜನೆಯ ಸದ್ಬಳಕೆ ಮಾಡಿಕೊಳ್ಳಬೇಕು. ವಿಮೆ ಪಾವತಿಸಲು ಜುಲೈ 31 ಕೊನೆಯ ದಿನಾಂಕವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಹೊಸನಗರ ತೋಟಗಾರಿಕೆ ಇಲಾಖೆ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

ಷರತ್ತುಗಳು :

  • ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ವಿಮಾ ನಷ್ಟ ಪರಿಹಾರವನ್ನು ಕರ್ನಾಟಕ ರಾಜ್ಯ ನೈಸರ್ಗಿಕ ಉಸ್ತುವಾರಿ ಕೇಂದ್ರವು ಗ್ರಾಮ ಪಂಚಾಯತಿ ಮಟ್ಟದಲ್ಲಿ ಸ್ಥಾಪಿಸಿರುವ ಮಳೆ ಮಾಪನ ಹಾಗೂ ಹವಾಮಾನ ಕೇಂದ್ರಗಳಲ್ಲಿ ದಾಖಲಾದ ಮಾಹಿತಿಯನ್ನಾಧಾರಿಸಿ ಅಂದಾಜಿಸಲಾಗುವುದು.
  • ಪರಿಹಾರದ ಮೊತ್ತವನ್ನು ನೀಡಲು ಅಧಿಸೂಚಿಸಲಾದ Term sheet, Pay out structure, Duration, Index (ಉದಾ: ಕಡಿಮೆ ಮಳೆ, ಅಧಿಕ ಮಳೆ-ಅಧಿಕ ಆದ್ರತೆ, ಅಧಿಕ ಮಳೆ. ಸತತ ನಾಲ್ಕು ದಿನಗಳಿಂದ ಅಧಿಕ ಮಳೆಯಿಂದಾಗಿ ಬೆಳೆಗಳಿಗೆ ಆಗುವ ಪ್ರತಿಕೂಲ ಪರಿಣಾಮಗಳು) ಗಳನ್ನಾಧಾರಿಸಿ ಅಂದಾಜಿಸಲಾಗುವುದು.
  • ಅಧಿಸೂಚಿತ ಘಟಕದಲಿ (ಗ್ರಾಮ ಪಂಚಾಯತ್) ವಿಮೆಗೆ ಒಳಪಟ್ಟ ಎಲ್ಲಾ ರೈತರಿಗೂ ವಿಮಾ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲಾಗುವುದು.
  • ಅಧಿಸೂಚಿಸಲಾದ ಬೆಳೆಗಳಿಗೆ ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪಗಳಾದ ಆಲಿಕಲು, ಮಳೆ, ಭೂಕುಸಿತ ಮತ್ತು ಬೆಳೆ ಮುಳುಗಡೆ ಸಂದರ್ಭಗಳಲಿ ಬೆಳೆ ನಷ್ಟವುಂಟಾದರೆ ವೈಯಕ್ತಿಕವಾಗಿ ನಮ್ಮವನ್ನು ನಿರ್ಧರಿಸಲು ವಿಮೆ ಮಾಡಿಸಿರುವ ರೈತರು ಈ ಬಗ್ಗೆ ಸಂಬಂಧಪಟ್ಟ ಹಣಕಾಸು ಸಂಸ್ಥೆ ಅಥವಾ ವಿಮಾ ಸಂಸ್ಥೆ ಕಚೇರಿಗಳಿಗೆ ವಿಮೆ ಮಾಡಿಸಿದ ಬೆಳೆಯ ವಿವರಗಳನ್ನು ಹಾನಿಯ ವ್ಯಾಪ್ತಿ ಹಾಗೂ ಹಾನಿಗೆ ಕಾರಣಗಳನ್ನು 72 ಗಂಟೆಗಳೊಳಗಾಗಿ ತಿಳಿಸತಕ್ಕದ್ದು.

Leave a Comment